ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm