ಬ್ರೇಕಿಂಗ್ ನ್ಯೂಸ್
28-05-21 09:04 pm Mangaluru Correspondent ಕರಾವಳಿ
ಮಂಗಳೂರು, ಮೇ 28: ಮಂಗಳೂರು ನಗರ ಪೊಲೀಸರು ಆರಂಭಿಸಿರುವ ಕೋವಿಡ್ ಸಮನ್ವಯ ಹೆಲ್ಪ್ ಲೈನ್ ಮೂಲಕ 80 ಮಂಗಳಮುಖಿಯರಿಗೆ ಕೋವಿಡ್ ದಿನಸಿ ಕಿಟ್ ವಿತರಿಸಲಾಗಿದೆ. ರಥಬೀದಿಯ ಉದ್ಯಮಿ ವಿಜಯೇಂದ್ರ ಭಟ್ ಕೊಡಮಾಡಿರುವ ಕಿಟ್ ಗಳನ್ನು ಇಂದು ಕಮಿಷನರ್ ಕಚೇರಿಯಲ್ಲಿ ಮಂಗಳಮುಖಿಯರಿಗೆ ವಿತರಣೆ ಮಾಡಲಾಯಿತು.
ತಲಾ ಹತ್ತು ಕೇಜಿ ದಿನಸಿ ಕಿಟ್ ಪ್ರಾಯೋಜಿಸಿದ ವಿಜಯೇಂದ್ರ ಭಟ್ ಅವರನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಭಿನಂದಿಸಿದರು. ಮೇ 21ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಕೋವಿಡ್ ಸಮನ್ವಯ ಎಂಬ ಹೊಸ ಪರಿಕಲ್ಪನೆಯಡಿ ಸಹಾಯವಾಣಿ ಆರಂಭಿಸಲಾಗಿತ್ತು. ಕೋವಿಡ್ ಸಂಕಷ್ಟದಿಂದ ಕಷ್ಟಕ್ಕೆ ಒಳಗಾದವರು, ವಿದೇಶದಲ್ಲಿದ್ದು ಊರಲ್ಲಿ ಕುಟುಂಬಸ್ಥರಿಗೆ ತೊಂದರೆ ಎದುರಾದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸ್ಪಂದಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದರು.
ಅದರಂತೆ, ವಿವಿಧ ಕಡೆಗಳಿಂದ ಕರೆಗಳು ಬಂದಿದ್ದು ಈವರೆಗೆ 24 ಕರೆಗಳಿಗೆ ಸ್ಪಂದಿಸಲಾಗಿದೆ. ಮಂಗಳಮುಖಿಯರ ಸಂಘದ ರಾಜ್ಯ ಘಟಕದಿಂದ ಕರೆ ಮಾಡಿ, ಮಂಗಳೂರಿನಲ್ಲಿರುವ ಮಂಗಳಮುಖಿ ಸದಸ್ಯರು ಕಷ್ಟದಲ್ಲಿರುವ ಬಗ್ಗೆ ಹೇಳಿಕೊಂಡಿದ್ದರು. ಹೀಗಾಗಿ ಉದ್ಯಮಿಗಳ ಮೂಲಕ ಆಹಾರದ ಕಿಟ್ ವಿತರಿಸುವ ಕೆಲಸ ಮಾಡಲಾಗಿದೆ. ವಿಜಯೇಂದ್ರ ಭಟ್ ದಿನಸಿ ಕಿಟ್ ಪ್ರಾಯೋಜಿಸಿದ್ದಾರೆ ಎಂದು ಕಮಿಷನರ್ ಇದೇ ವೇಳೆ ತಿಳಿಸಿದರು.
ಲಾಕ್ಡೌನ್ ಕಾರಣದಿಂದ ಬಹಳಷ್ಟು ಕಷ್ಟದಲ್ಲಿದ್ದೇವೆ. ರಾಜ್ಯ ಸರಕಾರದಿಂದಲೂ ನಮಗೆ ಯಾವುದೇ ಪರಿಹಾರ, ಸೌಲಭ್ಯ ದೊರಕಿಲ್ಲ. ನಮ್ಮ ಕಷ್ಟದ ಬಗ್ಗೆ ತಿಳಿದು ಸ್ಪಂದಿಸಿದ ಮಂಗಳೂರಿನ ಪೊಲೀಸರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಮಂಗಳಮುಖಿ ಹೇಮಾ ತಿಳಿಸಿದರು.
ಈ ಸಂದರ್ಭ ಡಿಸಿಪಿಗಳಾದ ಹರಿರಾಮ್ ಶಂಕರ್, ವಿನಯ ಗಾಂವ್ಕರ್, ಎಸಿಪಿಗಳಾದ ಮಹೇಶ್ ಕುಮಾರ್, ನಟರಾಜ್, ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಉಪಸ್ಥಿತರಿದ್ದರು.
Mangaluru city police commissioner N Shashi Kumar along with DCP (Law and Order) Hariram Shankar, DCP (Crime and Traffic) Vinay A Gaonkar distributed grocery kits to over 80 transgenders in the city on Friday, May 28. The grocery kits were distributed on the premises of the police commissioner's office.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm