ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm