ಬ್ರೇಕಿಂಗ್ ನ್ಯೂಸ್
01-06-21 02:06 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂನ್ 1: ಕೊರೊನಾ ಅಟ್ಟಹಾಸ, ಬ್ಲಾಕ್ ಫಂಗಸ್ ಸಂಕಷ್ಟ ಎದುರಾಗಿರುವ ನಡುವೆಯೇ ಸೋಂಕು ಪೀಡಿತ ಮಕ್ಕಳಲ್ಲಿ ಹೊಸ ರೀತಿಯ ರೋಗ ಪರಿಣಾಮ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಎನ್ನುವ ಲಕ್ಷಣಗಳು ಕಂಡುಬರುತ್ತಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ.
ಸಾಮಾನ್ಯವಾಗಿ 12 ವರ್ಷದ ಒಳಗಿನ ಮಕ್ಕಳಲ್ಲಿ ಈ ರೀತಿಯ ಗುಣಲಕ್ಷಣ ರೋಗ ವಾಸಿಯಾದ ಐದಾರು ವಾರಗಳ ಬಳಿಕ ಕಾಣಿಸಿಕೊಳ್ಳುತ್ತಿದೆ. ಈ ರೀತಿಯ ಲಕ್ಷಣವನ್ನು ಮಕ್ಕಳಲ್ಲಿ ಆರಂಭದಲ್ಲೇ ಪತ್ತೆ ಹಚ್ಚದಿದ್ದರೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ವರಿಸಿದ್ದಾರೆ.
ಬ್ಲಾಕ್ ಫಂಗಸ್ ರೀತಿಯಲ್ಲೇ ರೋಗ ನಿರೋಧಕ ಶಕ್ತಿ ಕಡಿಮೆಯಾದ ಕಾರಣ ಕಾಣಿಸಿಕೊಳ್ಳುವ ಅಡ್ಡ ಪರಿಣಾಮ ಇದಾಗಿದ್ದು ಇದರಿಂದ ಮಕ್ಕಳಲ್ಲಿ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಇದನ್ನು ವೈದ್ಯರು ಕವಾಸಕಿ ಸಿಂಡ್ರೋಮ್ ಎಂದು ಹೆಸರಿಸುತ್ತಿದ್ದಾರೆ. ಸೋಂಕು ಆಗಿ ಕೊರೊನಾ ನೆಗೆಟಿವ್ ಬಂದ ಮಕ್ಕಳಲ್ಲೂ ಈ ರೀತಿಯ ಲಕ್ಷಣ ಕಂಡುಬಂದಿದೆ.
ಅತಿಯಾದ ಜ್ವರ, ಕಣ್ಣು ಕೆಂಪಾಗುವುದು, ತುಟಿ, ನಾಲಿಗೆ ಕೆಂಪಾಗುವುದು, ವಾಂತಿ ಭೇದಿ ಕವಾಸಕಿ ಸಿಂಡ್ರೋಮ್ ಗುಣ ಲಕ್ಷಣಗಳು ಎಂದು ವೈದ್ಯರು ಹೇಳುತ್ತಿದ್ದಾರೆ.
ಮಂಗಳೂರಲ್ಲೂ 4 ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಕಂಡುಬಂದಿದ್ದು ಚಿಕಿತ್ಸೆಯ ಬಳಿಕ ಸಂಪೂರ್ಣ ಗುಣಮುಖರಾಗಿ ತೆರಳಿದ್ದಾರೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ಸಿಕ್ಕಿದೆ.
ರೋಗ ಲಕ್ಷಣಗಳ ಬಗ್ಗೆ ಪೋಷಕರು ಜಾಗೃತರಾಗಿದ್ದು ಸಂಶಯ ಕಂಡುಬಂದ ಕೂಡಲೇ ಮಕ್ಕಳ ತಜ್ಞರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
Kawasaki Disease in Infants and Young Children found in Mangalore after Covid and Black fungus. The condition causes inflammation in the blood vessels, and the symptoms can be severe. In addition to several days of fever, children with Kawasaki disease may develop symptoms such as rash, swollen neck glands, swollen hands and feet, and red eyes, lips, and tongue.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm