ಬ್ರೇಕಿಂಗ್ ನ್ಯೂಸ್
01-06-21 02:06 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂನ್ 1: ಕೊರೊನಾ ಅಟ್ಟಹಾಸ, ಬ್ಲಾಕ್ ಫಂಗಸ್ ಸಂಕಷ್ಟ ಎದುರಾಗಿರುವ ನಡುವೆಯೇ ಸೋಂಕು ಪೀಡಿತ ಮಕ್ಕಳಲ್ಲಿ ಹೊಸ ರೀತಿಯ ರೋಗ ಪರಿಣಾಮ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಎನ್ನುವ ಲಕ್ಷಣಗಳು ಕಂಡುಬರುತ್ತಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ.
ಸಾಮಾನ್ಯವಾಗಿ 12 ವರ್ಷದ ಒಳಗಿನ ಮಕ್ಕಳಲ್ಲಿ ಈ ರೀತಿಯ ಗುಣಲಕ್ಷಣ ರೋಗ ವಾಸಿಯಾದ ಐದಾರು ವಾರಗಳ ಬಳಿಕ ಕಾಣಿಸಿಕೊಳ್ಳುತ್ತಿದೆ. ಈ ರೀತಿಯ ಲಕ್ಷಣವನ್ನು ಮಕ್ಕಳಲ್ಲಿ ಆರಂಭದಲ್ಲೇ ಪತ್ತೆ ಹಚ್ಚದಿದ್ದರೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ವರಿಸಿದ್ದಾರೆ.

ಬ್ಲಾಕ್ ಫಂಗಸ್ ರೀತಿಯಲ್ಲೇ ರೋಗ ನಿರೋಧಕ ಶಕ್ತಿ ಕಡಿಮೆಯಾದ ಕಾರಣ ಕಾಣಿಸಿಕೊಳ್ಳುವ ಅಡ್ಡ ಪರಿಣಾಮ ಇದಾಗಿದ್ದು ಇದರಿಂದ ಮಕ್ಕಳಲ್ಲಿ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಇದನ್ನು ವೈದ್ಯರು ಕವಾಸಕಿ ಸಿಂಡ್ರೋಮ್ ಎಂದು ಹೆಸರಿಸುತ್ತಿದ್ದಾರೆ. ಸೋಂಕು ಆಗಿ ಕೊರೊನಾ ನೆಗೆಟಿವ್ ಬಂದ ಮಕ್ಕಳಲ್ಲೂ ಈ ರೀತಿಯ ಲಕ್ಷಣ ಕಂಡುಬಂದಿದೆ.
ಅತಿಯಾದ ಜ್ವರ, ಕಣ್ಣು ಕೆಂಪಾಗುವುದು, ತುಟಿ, ನಾಲಿಗೆ ಕೆಂಪಾಗುವುದು, ವಾಂತಿ ಭೇದಿ ಕವಾಸಕಿ ಸಿಂಡ್ರೋಮ್ ಗುಣ ಲಕ್ಷಣಗಳು ಎಂದು ವೈದ್ಯರು ಹೇಳುತ್ತಿದ್ದಾರೆ.

ಮಂಗಳೂರಲ್ಲೂ 4 ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಕಂಡುಬಂದಿದ್ದು ಚಿಕಿತ್ಸೆಯ ಬಳಿಕ ಸಂಪೂರ್ಣ ಗುಣಮುಖರಾಗಿ ತೆರಳಿದ್ದಾರೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ಸಿಕ್ಕಿದೆ.
ರೋಗ ಲಕ್ಷಣಗಳ ಬಗ್ಗೆ ಪೋಷಕರು ಜಾಗೃತರಾಗಿದ್ದು ಸಂಶಯ ಕಂಡುಬಂದ ಕೂಡಲೇ ಮಕ್ಕಳ ತಜ್ಞರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
Kawasaki Disease in Infants and Young Children found in Mangalore after Covid and Black fungus. The condition causes inflammation in the blood vessels, and the symptoms can be severe. In addition to several days of fever, children with Kawasaki disease may develop symptoms such as rash, swollen neck glands, swollen hands and feet, and red eyes, lips, and tongue.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm