ಬ್ರೇಕಿಂಗ್ ನ್ಯೂಸ್
01-06-21 03:44 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂನ್ 1 : ಅರಬ್ಬೀ ಸಮುದ್ರದ ಮಧ್ಯೆ ಇರುವ ಲಕ್ಷದ್ವೀಪಕ್ಕೂ ಮಂಗಳೂರಿನ ಹಳೆ ಬಂದರಿಗೂ ಹತ್ತಿರದ ಮತ್ತು ಬಹುಕಾಲದ ಸಂಬಂಧ. ದ್ವೀಪ ಸಮೂಹದ ಬೇಕು, ಬೇಡಗಳನ್ನು ಪೂರೈಸುತ್ತಿದ್ದುದೇ ಮಂಗಳೂರಿನ ಮಾರುಕಟ್ಟೆ. ಆದರೆ, ಕಳೆದ ಬಾರಿ ಕೊರೊನಾ ವಕ್ಕರಿಸಿದ ಬಳಿಕ ದ್ವೀಪ ಸಮೂಹದ ಜೊತೆಗಿನ ವ್ಯಾಪಾರ ಸಂಬಂಧಕ್ಕೆ ಬ್ರೇಕ್ ಬಿದ್ದಿದೆ.
ಕಳೆದ ಒಂದು ವರ್ಷದಿಂದ ರಾಜ್ಯದಿಂದ ದ್ವೀಪ ಸಮೂಹಕ್ಕೆ ಸರಕು ಸಾಗಾಟವೇ ಆಗಿಲ್ಲ. ಕಳೆದ ವರ್ಷ ಕೊರೊನಾ ಲಾಕ್ಡೌನ್ ಬಳಿಕ ಮಂಗಳೂರಿನ ಮಾರುಕಟ್ಟೆಯಿಂದ ದಿನಸಿ ಸಾಮಗ್ರಿಯಾಗಲೀ, ಇನ್ನಿತರ ಅಗತ್ಯ ವಸ್ತುವಾಗಲೀ ದ್ವೀಪಕ್ಕೆ ಪೂರೈಕೆ ಆಗಿಲ್ಲ.

ಹೀಗಾಗಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ರು. ಆದಾಯ ನಷ್ಟವಾಗಿದೆ. ಕಳೆದ ಬಾರಿಯ ಕೊರೊನಾ ಲಾಕ್ಡೌನ್ ಬಳಿಕ ಲಕ್ಷದ್ವೀಪದ ಸಂಪೂರ್ಣ ವ್ಯಾಪಾರ ವಹಿವಾಟು ಕೇರಳದಿಂದ ನಡೆಯುತ್ತಿದೆ. ಲಕ್ಷದ್ವೀಪ ಸಮೂಹಕ್ಕೆ ದಿನಸಿ, ತರಕಾರಿ, ಕೋಳಿ ಇನ್ನಿತರ ಮಾಂಸ, ಸೀಮೆಂಟ್, ಕಬ್ಬಿಣ, ಜಲ್ಲಿ, ಮರಳು ಇತ್ಯಾದಿ ಕಟ್ಟಡ ನಿರ್ಮಾಣ ಸಾಮಗ್ರಿಗಳ ಪೈಕಿ ಶೇ.30ರಷ್ಟು ಭಾಗ ಮಂಗಳೂರು ಬಂದರಿನಿಂದ ಸಾಗಾಟ ಆಗುತ್ತಿತ್ತು. ಇನ್ನುಳಿದ ಸಾಮಗ್ರಿ ಕೇರಳದ ಬೇಪೂರ್ ಹಾಗೂ ಕೊಚ್ಚಿ ಬಂದರಿನಿಂದ ಪೂರೈಕೆಯಾಗುತ್ತದೆ. ಆದರೆ ಒಂದೂವರೆ ವರ್ಷಗಳಿಂದ ಮಂಗಳೂರು ಬಂದರಿನಿಂದ ನಿಂತು ಹೋಗಿರುವ ವ್ಯಾಪಾರ ಸಂಬಂಧ ಮತ್ತೆ ಹಳಿಗೆ ಬಂದಿಲ್ಲ. ರಾಜ್ಯದಿಂದ ಸರಕು ಸಾಗಣೆಗೆ ಅವಕಾಶ ನೀಡದಿದ್ದ ಕಾರಣ ಕೇರಳದಿಂದಲೇ ಪೂರ್ತಿಯಾಗಿ ಸರಕು ಸಾಗಣೆಯಾಗುತ್ತಿದೆ.


ರಾಜ್ಯದಿಂದ ಬೇರೆ ರಾಜ್ಯಗಳಿಗೆ ಮತ್ತು ವಿದೇಶಕ್ಕೆ ಸರಕು ಸಾಗಾಟಕ್ಕೆ ಅವಕಾಶ ಇದ್ದರೂ ಲಕ್ಷದ್ವೀಪಕ್ಕೆ ಮಾತ್ರ ಇನ್ನೂ ಅವಕಾಶ ನೀಡಿಲ್ಲ. ಇದರಿಂದಾಗಿ ರಾಜ್ಯದ ರೈತರ ಉತ್ಪಾದನೆಗಳಿಗೆ ಖಚಿತ ಮಾರುಕಟ್ಟೆಯನ್ನೇ ಕಳೆದುಕೊಂಡಂತಾಗಿದೆ.
ಮಂಗಳೂರು ಹಳೆ ಬಂದರಿನಿಂದ ವಾರಕ್ಕೆ 100ಕ್ಕೂ ಅಧಿಕ ಟನ್ ಸರಕು ತುಂಬಿಕೊಂಡು ನಾಲ್ಕೈದು ಸಣ್ಣಮಟ್ಟಿನ ಹಡಗುಗಳು ಪ್ರತಿವಾರ ಲಕ್ಷದ್ವೀಪಕ್ಕೆ ಸಂಚರಿಸುತ್ತಿದ್ದವು. ಇದಲ್ಲದೆ, ವಾರಕ್ಕೊಮ್ಮೆ ಪ್ರಯಾಣಿಕರ ಸಂಚಾರಕ್ಕೆ ಹಡಗು ತೆರಳುತ್ತಿತ್ತು. ಇದರಿಂದ ವಾರವೊಂದಕ್ಕೇ ಹಲವು ಕೋಟಿ ರು.ಗಳ ವಹಿವಾಟು ನಡೆಯುತ್ತಿತ್ತು.
ಕಳೆದ ವರ್ಷದಿಂದ 2-3 ಬಾರಿ ಪ್ರಯಾಣಿಕರ ಹಡಗು ಸಂಚಾರಕ್ಕೆ ಅವಕಾಶ ಮಾತ್ರ ನೀಡಿದ್ದರೂ ಸರಕು ಸಾಗಾಟಕ್ಕೆ ರಾಜ್ಯದಿಂದ ಅನುಮತಿ ನೀಡಿಲ್ಲ ಎಂದು ಉದ್ಯಮಿ ಹಾಗೂ ಬಂದರು ಶ್ರಮಿಕರ ಸಂಘದ ಕಾರ್ಯದರ್ಶಿ ಬಿ.ಕೆ. ಇಮ್ತಿಯಾಜ್ ಆತಂಕ ತೋಡಿಕೊಂಡಿದ್ದಾರೆ.


ಲಕ್ಷದ್ವೀಪದ ಸರಕು ಸಾಗಣೆ ನಿಂತು ಹೋಗಿದ್ದರಿಂದ ನೂರಾರು ಕಾರ್ಮಿಕರಿಗೆ ಕೆಲಸವಿಲ್ಲದಾಗಿದೆ. ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸಾಗುವ ಹಡಗಿನಲ್ಲಿ ಮತ್ತು ಲೋಡಿಂಗ್- ಅನ್ ಲೋಡಿಂಗ್ ಕೆಲಸಕ್ಕಾಗಿಯೇ ಹಳೆ ಬಂದರಿನಲ್ಲಿ 300ಕ್ಕೂ ಹೆಚ್ಚು ಕಾರ್ಮಿಕರಿದ್ದಾರೆ.
ಕಳೆದ ವರ್ಷದಿಂದೀಚೆಗೆ ಈ ದುಡಿದು ತಿನ್ನುವ ವರ್ಗದ ಅನ್ನಕ್ಕೂ ಕಲ್ಲು ಬಿದ್ದಿದೆ.
Mangalore Lakshadweep trading in huge loss after covid lockdown imposed in Karnataka.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm