ಬ್ರೇಕಿಂಗ್ ನ್ಯೂಸ್
29-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 29: ಉಳ್ಳಾಲದ ಕೋಡಿ ಬಳಿಯ ಸೇನೆರೆಬೈಲಿನಲ್ಲಿ ಸ್ಥಳೀಯರ ವಿರೋಧದ ಮಧ್ಯೆ ಭಾರೀ ಪೊಲೀಸ್ ಭದ್ರತೆಯಲ್ಲಿ ದ್ರವ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಏಳು ವರ್ಷಗಳ ಹಿಂದೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ 70 ಕೋಟಿ ಅನುದಾನ ಬಿಡುಗಡೆಗೊಂಡು ನಗರದಾದ್ಯಂತ ಪೈಪ್ ಲೈನ್ ಅಳವಡಿಸಲಾಗಿತ್ತು. ಅದರಂತೆ, ನಗರ ವ್ಯಾಪ್ತಿಯ ಸೇಣೆರೆಬೈಲು, ಕಲ್ಲಾಪು, ಹೊಸಗದ್ದೆ ಎಂಬ ಮೂರು ಪ್ರದೇಶಗಳಲ್ಲಿ ದ್ರವ ತ್ಯಾಜ್ಯ ಸಂಸ್ಕರಣೆ ಮತ್ತು ಶುದ್ದೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸ್ಥಳೀಯ ನಿವಾಸಿಗಳು ದ್ರವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
ಇದೀಗ ಸೇಣೆರೆಬೈಲಿನಲ್ಲಿ ಘಟಕ ನಿರ್ಮಾಣಕ್ಕೆ ಕೋರ್ಟ್ ಅವಕಾಶ ಕೊಟ್ಟಿದ್ದರಿಂದ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿದ್ದು ಘಟಕವನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯ ಮುಖಂಡರ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿತ್ತು. ಆದರೆ ನಗರಸಭೆ ಅಧಿಕಾರಿಗಳು, ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸಿಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.



ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ದ್ರವತ್ಯಾಜ್ಯ ಶುದ್ಧೀಕರಿಸುವ ನಿಟ್ಟಿನಲ್ಲಿ ಸೇನರಬೈಲಿನಲ್ಲಿ ನೂತನ ಘಟಕ ನಿರ್ಮಿಸಲಾಗುತ್ತಿದೆ. ಆದರೆ, ಇದರಿಂದ ಆಗಬಹುದಾದ ತೊಂದರೆಗಳಿಂದ ಆತಂಕಕ್ಕೀಡಾಗಿರುವ ಸ್ಥಳೀಯ ನಿವಾಸಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಿಗದಿತ ಪ್ರದೇಶ ಜನವಸತಿಯಿಂದ ಕೂಡಿದ್ದು 300 ಮೀಟರ್ ಅಂತರದಲ್ಲಿ ಸುಮಾರು ಏಳು ಸಾವಿರ ಜನಸಂಖ್ಯೆ ಇದ್ದಾರೆ. ಮೂರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಆರು ಮಸೀದಿಗಳು, ಮೂರು ದೇವಸ್ಥಾನಗಳಿದ್ದು ಸ್ಥಳ ಗುರುತಿಸುವ ಸಂದರ್ಭ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳೀಯರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿತ್ತು. ಈ ಪ್ರದೇಶದಲ್ಲಿ ಮೀನುಗಾರಿಕಾ ಕಾರ್ಖಾನೆಗಳಿಂದ ಕಲುಷಿತ ನೀರು ಬಿಡಲಾಗುತ್ತಿದ್ದು, ಇದರಿಂದಾಗಿ ಈಗಾಗಲೇ ಪರಿಸರ ಕಲುಷಿತಗೊಂಡಿದೆ. ಒಳಚರಂಡಿ ತ್ಯಾಜ್ಯ ಶುದ್ದೀಕರಣ ಘಟಕ ನಿರ್ಮಾಣಗೊಂಡರೆ ವಾಯು ಮಾಲಿನ್ಯ, ಪರಿಸರ ಮಾಲಿನ್ಯ ಹೆಚ್ಚಾಗಿ ದುರ್ವಾಸನೆಯಿಂದ ಚರ್ಮರೋಗ, ಸಾಂಕ್ರಾಮಿಕ ರೋಗ ಹರಡುವ ಅಪಾಯವಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm