ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.

ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm