ಬ್ರೇಕಿಂಗ್ ನ್ಯೂಸ್
03-06-21 09:52 pm Mangaluru Correspondant ಕರಾವಳಿ
ಮಂಗಳೂರು, ಜೂನ್ 3: ಗರ್ಭಿಣಿ ಮಹಿಳೆಯೊಬ್ಬರು ತನಗೆ ಕೊರೊನಾ ಸೋಂಕು ಇದೆಯೆಂದು ಖಾಸಗಿ ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡದೇ ವೈದ್ಯರು ತನ್ನ ಪ್ರಾಣದ ಜೊತೆ ಚೆಲ್ಲಾಟವಾಡಿದ್ದಾರೆ ಎಂದು ಆರೋಪಿಸಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರದ ಗೈನಕಾಲಜಿಸ್ಟ್ ಡಾ.ಪ್ರಿಯಾ ಬಲ್ಲಾಳ್, ಡಾ.ಜಯಪ್ರಕಾಶ್ ಶೆಟ್ಟಿ ಸೇರಿ ಐದು ವೈದ್ಯರ ವಿರುದ್ಧ ಮಹಿಳೆ ದೂರು ನೀಡಿದ್ದು, ವಾರದ ಹಿಂದೆ ಆಸ್ಪತ್ರೆಗೆ ತೆರಳಿದ್ದಾಗ ತನ್ನನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದೆ ಸತಾಯಿಸಿದ್ದಾರೆ ಎಂದು ದೂರಿದ್ದಾರೆ. ಕಾಟಿಪಳ್ಳದ ಖತೀಜಾ ಜಾಸ್ಮಿನ್ ಎಂಬ ಮಹಿಳೆ ಹೆರಿಗೆ ನೋವು ಇದೆಯೆಂದು ಆಸ್ಪತ್ರೆಗೆ ಬಂದಿದ್ದರು ಎನ್ನಲಾಗಿದ್ದು, ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಕಂಡುಬಂದಿತ್ತು. ಇದರಿಂದಾಗಿ ನಿಮ್ಮನ್ನು ಅಡ್ಮಿಟ್ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ವೈದ್ಯರು ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ.

ಆನಂತರ ಅಥೆನಾ ಸೇರಿದಂತೆ ಬೇರೆ ಕೆಲವು ಆಸ್ಪತ್ರೆಗಳಿಗೂ ಅಲೆದಾಡಿದ್ದು ಅಲ್ಲಿಯೂ ದಾಖಲು ಮಾಡಿಕೊಳ್ಳದೆ ಸತಾಯಿಸಿದ್ದಾರೆ. ಕೊನೆಗೆ, ಲೇಡಿಗೋಷನ್ ಆಸ್ಪತ್ರೆಯಲ್ಲಿ ಸೇರ್ಪಡೆಗೊಂಡು ಸುರಕ್ಷಿತ ಹೆರಿಗೆ ಆಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಇದೇ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿಕೊಳ್ಳದ ವಿಚಾರದಲ್ಲಿ ಕೆಲವು ಯುವಕರು ಅಥೆನಾ ಆಸ್ಪತ್ರೆಯ ವೈದ್ಯ ಡಾ.ಜಯಪ್ರಕಾಶ್ ಶೆಟ್ಟಿ ಜೊತೆ ಜಟಾಪಟಿ ನಡೆಸಿದ್ದು, ಜೀವ ಬೆದರಿಕೆ ಹಾಕಿದ್ದ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಯಪ್ರಕಾಶ್ ಶೆಟ್ಟಿ ನೀಡಿರುವ ದೂರಿನಂತೆ ಪೊಲೀಸರು, ಪ್ರಕರಣ ದಾಖಲಿಸಿ ಒಬ್ಬಾತನನ್ನು ಬಂಧಿಸಿದ್ದರು. ಆದರೆ ಇವೆಲ್ಲ ಘಟನೆ ನಡೆದು ಒಂದು ವಾರದ ಬಳಿಕ ಗರ್ಭಿಣಿ ಮಹಿಳೆ ಡಾ.ಪ್ರಿಯಾ ಬಳ್ಳಾಲ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತನ್ನನ್ನು ಸೇರಿಸಿಕೊಳ್ಳದೆ ಸತಾಯಿಸಿದ್ದಾರೆಂದು ದೂರು ನೀಡಿದ್ದು ಸಂಶಯಕ್ಕೆ ಕಾರಣವಾಗಿದೆ. ಇದರ ಹಿಂದೆ ಯಾರೋ ಕೆಲವರು ಕೈಯಾಡಿಸಿದ್ದಾರೆಂಬ ಮಾತೂ ಕೇಳಿಬರುತ್ತಿದೆ. ಈ ಬಗ್ಗೆ ಡಾ.ಜಯಪ್ರಕಾಶ್ ಶೆಟ್ಟಿ ಕೇಳಿದರೆ, ಒಟ್ಟು ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇದೇ ವೇಳೆ, ಪ್ರಿಯಾ ಬಳ್ಳಾಲ್ ಸೇರಿದಂತೆ ವೈದ್ಯರ ಪರವಾಗಿ ಮಂಗಳೂರಿನ ಐಎಂಎ ವೈದ್ಯರ ಸಂಘ ಸುದ್ದಿಗೋಷ್ಠಿ ಕರೆದು ಬ್ಯಾಟಿಂಗ್ ಮಾಡಲು ಸಿದ್ಧತೆ ನಡೆಸಿದೆ.
ಮೆಟರ್ನಿಟಿ ಬ್ಲಾಕ್ ಎಲ್ಲ ಕಡೆ ಇಲ್ಲ !

ಗರ್ಭಿಣಿ ಮಹಿಳೆಯರಿಗೆ ಕೊರೊನಾ ಸೋಂಕು ಇದ್ದಲ್ಲಿ ಅವರನ್ನು ಸಾದಾ ವಾರ್ಡ್ ಗಳಲ್ಲಿ ದಾಖಲು ಮಾಡಿಕೊಳ್ಳುವಂತಿಲ್ಲ. ಮೆಟರ್ನಿಟಿ ಬ್ಲಾಕ್ ಗಳಲ್ಲಿಯೇ ದಾಖಲು ಮಾಡಿಕೊಳ್ಳಬೇಕೆಂದು ಮಾರ್ಗಸೂಚಿ ಇದೆ. ಆದರೆ, ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಈ ಬಗ್ಗೆ ಪ್ರತ್ಯೇಕ ಮೆಟರ್ನಿಟಿ ವಾರ್ಡ್ ಇರುವುದಿಲ್ಲ. ಹೀಗಾಗಿ ಕೆಲವು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ದಾಖಲು ಮಾಡಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತವೆ. ಸರಕಾರಿ ಲೇಡಿಗೋಷನ್ ಆಸ್ಪತ್ರೆ ಸುಸಜ್ಜಿತ ಆಗಿರುವುದಲ್ಲದೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವುದಲ್ಲದೆ, ಕಳೆದ ಬಾರಿ ಕೊರೊನಾ ಸೋಂಕು ಕಂಡುಬಂದ ಬಳಿಕ ಅದಕ್ಕಾಗಿಯೇ ಪ್ರತ್ಯೇಕ ಮೆಟರ್ನಿಟಿ ಬ್ಲಾಕ್ ಮಾಡಲಾಗಿದೆ.
Mangalore Denied timely treatment Covid pregnant woman files Complaint on Doctors at Kadri Police Station. Few backs back family of the woman had assaulted and threatened the doctor for not treating her because of Covid in which Doctor Jayaprakash Shetty had filed a complaint at the same Kadri Police Station.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm