ಬ್ರೇಕಿಂಗ್ ನ್ಯೂಸ್
04-06-21 04:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಕೈಮಾಡಿದ್ದ ಆರೋಪದಲ್ಲಿ ಕಂಕನಾಡಿ ಪೊಲೀಸರು ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಠಾಣೆಯ ಮುಂದೆ ಸೇರಿದ್ದು ಪೊಲೀಸರಿಗೆ ಘೆರಾವ್ ಹಾಕಿದ ಘಟನೆ ನಡೆದಿದೆ.



ನಾಗುರಿಯ ಕಂಕನಾಡಿ ನಗರ ಠಾಣೆಯ ಹೊರಭಾಗದಲ್ಲಿ ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದು, ಸುಹೈಲ್ ಕಂದಕ್ ಮೇಲೆ ಪೊಲೀಸರು ಕೈಮಾಡಿ ಎಳಕೊಂಡು ಬಂದಿದ್ದಾರೆಂದು ಆರೋಪಿಸಿ ಘೆರಾವ್ ಹಾಕಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ, ಐವಾನ್ ಡಿಸೋಜ, ಮಿಥುನ್ ರೈ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಕೂಡ ಆಗಮಿಸಿದ್ದು ಸೇರಿರುವ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಸಮಾಧಾನ ಮಾಡುತ್ತಿದ್ದಾರೆ.





ಇಂಡಿಯಾನಾ ಆಸ್ಪತ್ರೆಯಲ್ಲಿ 15 ದಿನಗಳ ಹಿಂದೆ ಕೋರೊನಾ ಸೋಂಕಿತ ರೋಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಅದೇ ದಿನ ಮಧ್ಯರಾತ್ರಿ ವೈದ್ಯರ ಚಿಕಿತ್ಸೆಯ ವೈಫಲ್ಯದಿಂದ ಸಾವು ಆಗಿದೆಯೆಂದು ಸುಹೈಲ್ ಕಂದಕ್ ಮತ್ತು ತಂಡ ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿತ್ತು ಎನ್ನುವ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಸುಹೈಲ್ ಕಂದಕ್ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಆತನನ್ನು ಠಾಣೆಗೆ ಬರುವಂತೆ ಕರೆದಿದ್ದರು. ಆದರೆ, ಆತ ವಿಚಾರಣೆಗೆ ಬಂದಿರಲಿಲ್ಲ. ಇಂದು ಮಧ್ಯಾಹ್ನ ಫಳ್ನೀರ್ ಬಳಿಯಿದ್ದ ಸುಹೈಲ್ ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಬಳಿ ಸೇರಿದ್ದಾರೆ.
Mangalore Congress youth leader Suhail Kandak is taken to custody in connection to creating disruption at Indiana Hospital 14 days back. Hundreds of Youth Congress members and leaders gather at kankanady police station. Commissioner Shashi Kumar and Dcp Hariram Shankar are on the spot.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm