ಬ್ರೇಕಿಂಗ್ ನ್ಯೂಸ್
04-06-21 04:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಕೈಮಾಡಿದ್ದ ಆರೋಪದಲ್ಲಿ ಕಂಕನಾಡಿ ಪೊಲೀಸರು ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಠಾಣೆಯ ಮುಂದೆ ಸೇರಿದ್ದು ಪೊಲೀಸರಿಗೆ ಘೆರಾವ್ ಹಾಕಿದ ಘಟನೆ ನಡೆದಿದೆ.



ನಾಗುರಿಯ ಕಂಕನಾಡಿ ನಗರ ಠಾಣೆಯ ಹೊರಭಾಗದಲ್ಲಿ ಕೋವಿಡ್ ಲಾಕ್ಡೌನ್ ಉಲ್ಲಂಘಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದು, ಸುಹೈಲ್ ಕಂದಕ್ ಮೇಲೆ ಪೊಲೀಸರು ಕೈಮಾಡಿ ಎಳಕೊಂಡು ಬಂದಿದ್ದಾರೆಂದು ಆರೋಪಿಸಿ ಘೆರಾವ್ ಹಾಕಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ, ಐವಾನ್ ಡಿಸೋಜ, ಮಿಥುನ್ ರೈ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ಕೂಡ ಆಗಮಿಸಿದ್ದು ಸೇರಿರುವ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಸಮಾಧಾನ ಮಾಡುತ್ತಿದ್ದಾರೆ.





ಇಂಡಿಯಾನಾ ಆಸ್ಪತ್ರೆಯಲ್ಲಿ 15 ದಿನಗಳ ಹಿಂದೆ ಕೋರೊನಾ ಸೋಂಕಿತ ರೋಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಅದೇ ದಿನ ಮಧ್ಯರಾತ್ರಿ ವೈದ್ಯರ ಚಿಕಿತ್ಸೆಯ ವೈಫಲ್ಯದಿಂದ ಸಾವು ಆಗಿದೆಯೆಂದು ಸುಹೈಲ್ ಕಂದಕ್ ಮತ್ತು ತಂಡ ಇಂಡಿಯಾನಾ ಆಸ್ಪತ್ರೆಗೆ ನುಗ್ಗಿ ವೈದ್ಯರನ್ನು ನಿಂದಿಸಿ, ಹಲ್ಲೆಗೆ ಯತ್ನಿಸಿತ್ತು ಎನ್ನುವ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಸುಹೈಲ್ ಕಂದಕ್ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಆತನನ್ನು ಠಾಣೆಗೆ ಬರುವಂತೆ ಕರೆದಿದ್ದರು. ಆದರೆ, ಆತ ವಿಚಾರಣೆಗೆ ಬಂದಿರಲಿಲ್ಲ. ಇಂದು ಮಧ್ಯಾಹ್ನ ಫಳ್ನೀರ್ ಬಳಿಯಿದ್ದ ಸುಹೈಲ್ ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಬಳಿ ಸೇರಿದ್ದಾರೆ.
Mangalore Congress youth leader Suhail Kandak is taken to custody in connection to creating disruption at Indiana Hospital 14 days back. Hundreds of Youth Congress members and leaders gather at kankanady police station. Commissioner Shashi Kumar and Dcp Hariram Shankar are on the spot.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm