ಬ್ರೇಕಿಂಗ್ ನ್ಯೂಸ್
05-06-21 11:02 pm Mangaluru Correspondent ಕರಾವಳಿ
ಮಂಗಳೂರು, ಜೂ.5: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. 10 ವರ್ಷ ಪ್ರಾಯದ ರಾಣಿ ಹೆಸರಿನ ಹುಲಿ 3 ಮರಿಗಳಿಗೆ ಜನ್ಮ ನೀಡಿದ್ದು ಆರೋಗ್ಯವಾಗಿದೆ.
ಮರಿಗಳು ಆರೋಗ್ಯದಿಂದಿದ್ದು, 16 ದಿನಗಳಲ್ಲಿ ಕಣ್ಣು ತೆರೆಯಲಿವೆ ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ರಾಣಿ ಹುಲಿಯು 2019ರಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಹಾಗೂ ವಿಜಯ ಎಂಬ ಐದು ಮರಿಗಳಿಗೆ ಜನ್ಮ ನೀಡಿತ್ತು. ಅವುಗಳು ಬೆಳೆದಿದ್ದು, ಇವುಗಳಿಗೆ ಪ್ರತ್ಯೇಕವಾದ ವಾಸದ ಮನೆಯನ್ನು ನಿರ್ಮಿಸಲಾಗಿದೆ. ಅಬುಧಾಬಿಯ ರಾಮದಾಸ ಕಾಮತ್ ದಂಪತಿ 15 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಲು ಸಹಕರಿಸಿದ್ದಾರೆ. ರಾಣಿಯನ್ನು ಈ ಹಿಂದೆ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಮೃಗಾಲಯದಿಂದ ತರಲಾಗಿತ್ತು. ಅದರ ಬದಲಿಗೆ ಗಂಡು ಹುಲಿಯನ್ನು ಇಲ್ಲಿಂದ ನೀಡಲಾಗಿತ್ತು. ಇದೀಗ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 13ಕ್ಕೆ ಏರಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣ ಮೃಗಾಲಯದಿಂದ ತರಿಸಿಕೊಂಡ ಅಳಿವಿನಂಚಿನ ಕಾಡು ಶ್ವಾನಗಳ ವರ್ಗಕ್ಕೆ ಸೇರಿದ ‘ದೋಳ್’ ನಾಯಿ ಇತ್ತೀಚೆಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಇದು ಈ ಹಿಂದೆ ಐದು ಮರಿಗಳಿಗೆ ಜನ್ಮ ನೀಡಿತ್ತು. ಇನ್ನೊಂದು ದೋಳ್ 10 ಮರಿಗಳಿಗೆ ಜನ್ಮ ನೀಡಿತ್ತು. ಇದರೊಂದಿಗೆ ಪಿಲಿಕುಳದಲ್ಲಿ ದೋಳ್ ಕಾಡು ಶ್ವಾನಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ರಿಯಾ ಪಕ್ಷಿಯ ಜನನ
ಉಷ್ಟ್ರ ಪಕ್ಷಿಯ ವರ್ಗಕ್ಕೆ ಸೇರಿದ ಬಿಳಿ ರಿಯಾ ಮೊಟ್ಟೆಗಳನ್ನಿಟ್ಟಿದ್ದು ಅವುಗಳಿಗೆ ಕಾವು ಕೊಡಲಾಗುತ್ತಿದೆ. ಅದರಲ್ಲಿ ಈಗಾಗಲೇ ಒಂದು ಬಿಳಿ ರಿಯಾ ಮೊಟ್ಟೆಯೊಡೆದು ಹೊರಬಂದಿದೆ. ಎರಡು ಬಿಳಿ ಮತ್ತು ಎರಡು ಕಂದು ರಿಯಾಗಳನ್ನು ಪ್ರಾಣಿ ವಿನಿಮಯದಡಿ ಕೇರಳದ ತಿರುವನಂತಪುರದಿಂದ ತರಲಾಗಿತ್ತು.
ಅಪರೂಪದ ರೆಟಿಕ್ಯುಲೇಟೆಡ್ ಹೆಬ್ಬಾವು ಸುಮಾರು 20 ಮೊಟ್ಟೆಗಳನ್ನಿಟ್ಟು ಕಾವು ನೀಡುತ್ತಿದೆ. ಇದೇ ಹೆಬ್ಬಾವು ಕಳೆದ ಸಾಲಿನಲ್ಲಿ 17 ಮರಿಗಳಿಗೆ ಜನ್ಮ ನೀಡಿತ್ತು. ಈ ಹೆಬ್ಬಾವು ನಿಕೊಬಾರ್ನಲ್ಲಿ ಕಾಣ ಸಿಗುತ್ತಿದ್ದು ಅಳಿವಿನಂಚಿನಲ್ಲಿದೆ ಎನ್ನಲಾಗುತ್ತಿದೆ.
ಇದೇ ವೇಳೆ, ಪಿಲಿಕುಳ ಮೃಗಾಲಯದಲ್ಲಿ ಕಾಳಿಂಗ ಸಂತಾನಭಿವೃದ್ಧಿಯನ್ನೂ ಮಾಡಿದೆ. ದೇಶದಲ್ಲೇ ಹೆಸರು ಮಾಡಿದ್ದ ‘ನಾಗಮಣಿ’ ಕಾಳಿಂಗವು ಆರು ಮೊಟ್ಟೆಗಳನ್ನಿಟ್ಟಿದ್ದು ಕೃತಕ ಕಾವು ಕೊಡಲಾಗುತ್ತಿದೆ. ಪಿಲಿಕುಳದಲ್ಲಿ ಒಟ್ಟು 19 ಕಾಳಿಂಗ ಸರ್ಪಗಳಿವೆ.
ಕೊರೊನಾ ಅನ್ಲಾಕ್ ಬಳಿಕ ಚೆನ್ನೈನ ವಂಡಲೂರು ಮೃಗಾಲಯದಿಂದ ಬಿಳಿ ಹುಲಿಯನ್ನು ತರಿಸಲಾಗುವುದು. ಪ್ರಾಣಿ ವಿನಿಮಯದಲ್ಲಿ ನಂದನಕಾನನ್, ಸೂರತ್ ಮತ್ತು ಹೈದರಾಬಾದ್ ಮೃಗಾಲಯದಿಂದ ಕೆಲವು ಪ್ರಾಣಿ ಪಕ್ಷಿಗಳನ್ನು ತರುವ ಬಗ್ಗೆ ಕಾರ್ಯಕ್ರಮ ಇದೆ ಎಂದು ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
Mangaluru Animals flourish in covid times. While Tiger 'Rani' gave birth to 3 cubs, a dhole littered seven pups at Pilikula Zoo recently. A rhea chick was hatched in an incubator
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm