ಬ್ರೇಕಿಂಗ್ ನ್ಯೂಸ್
06-06-21 04:55 pm Sandesh, Puttur ಕರಾವಳಿ
Photo credits : Oneindia Kannada
ಮಂಗಳೂರು, ಜೂ.6: ಲಾಕ್ಡೌನ್ ಬಿಸಿ ಕೂಲಿ ಮಾಡಿ ಬದುಕುವ ಜನಸಾಮಾನ್ಯರಿಗೆ ಮಾತ್ರ ತಟ್ಟಿದ್ದಲ್ಲ. ಬೀದಿಯಲ್ಲಿ ಅಲೆಯುವ ನಾಯಿಗಳಿಗೂ ತಟ್ಟಿದೆ. ನಗರ ಭಾಗದಲ್ಲಿ ಅದೆಷ್ಟೋ ನಾಯಿಗಳು ಆಹಾರ ಇಲ್ಲದೆ ಬಸವಳಿಯುವ ಸನ್ನಿವೇಶ ನಿರ್ಮಾಣವಾಗಿದೆ. ಆದರೆ, ಪುತ್ತೂರು ಪೇಟೆಯಲ್ಲಿ ಮಾತ್ರ ಬೀದಿ ನಾಯಿಗಳಿಗೆ ಈ ಬಾರಿ ಲಾಕ್ಡೌನ್ ಬಿಸಿಯೇ ತಟ್ಟಿಲ್ಲ.
ಪುತ್ತೂರು ನಗರದಲ್ಲಿ 150ಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು ಎಲ್ಲದಕ್ಕೂ ಸಮಯಕ್ಕೆ ಸರಿಯಾಗಿ ಆಹಾರ ಪೂರೈಕೆಯಾಗುತ್ತಿದೆ. ಹೌದು, ನಾಯಿಗಳಿಗೂ ಜೀವ ಇದೆ ಎಂದು ಕಾಲ ಕಾಲಕ್ಕೆ ಆಹಾರ ಪೂರೈಕೆ ಮಾಡುತ್ತಾ ಸುದ್ದಿಯಾದವರು ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು.

ಇವರು ತಮ್ಮ ಮನೆಯಲ್ಲೇ ನಾಯಿಗಳಿಗೆ ಆಹಾರವನ್ನು ತಯಾರಿಸುತ್ತಾರೆ. ದ್ವಿಚಕ್ರ ವಾಹನದಲ್ಲಿ ನಗರದ ತುಂಬೆಲ್ಲಾ ಓಡಾಡಿ ನಾಯಿಗಳಿಗೆ ಆಹಾರ ಪೂರೈಕೆಯನ್ನು ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಈ ಕಾಯಕವನ್ನು ರಾತ್ರಿ ಸಮಯದಲ್ಲಿ ಮಾಡುತ್ತಾ ಬಂದಿದ್ದ ರಾಜೇಶ್ ಬನ್ನೂರು ಲಾಕ್ಡೌನ್ ಕಾರಣದಿಂದಾಗಿ ನಾಯಿಗಳಿಗೆ ಆಹಾರ ನೀಡಲು ಸಂಜೆಯೇ ಹೊರಡುತ್ತಾರೆ. ರಾತ್ರಿ 11 ಗಂಟೆಯ ವರೆಗೆ ಆಹಾರ ನೀಡುತ್ತಾ ಮುಂದುವರಿಯುವ ಇವರ ದಾರಿಯನ್ನೇ ಕಾಯುವ ನೂರಾರು ನಾಯಿಗಳು ಪುತ್ತೂರಿನಲ್ಲಿವೆ.
ಬೀದಿ ನಾಯಿಗಳನ್ನು ಒಂದು ಕಡೆ ಸೇರಿಸಿ ಅವುಗಳಿಗೆ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕೆಂಬ ಆಶಯವೂ ರಾಜೇಶ್ ಬನ್ನೂರು ಅವರದ್ದಾಗಿದೆ. ಅದಕ್ಕಾಗಿ ಸರಕಾರವೇನಾದರೂ ಭೂಮಿಗ ನೀಡಿದಲ್ಲಿ ಸಣ್ಣ ಮಟ್ಟಿನ ಶೆಡ್ ನಿರ್ಮಿಸಿ ಬೀದಿ ನಾಯಿಗಳನ್ನು ಸಾಕಬೇಕೆನ್ನುವ ಇವರ ಆಶಯವೂ ಇವರದ್ದಿದೆ.
ನಗರಸಭೆಯ ಸದಸ್ಯತ್ವದ ಜೊತೆಗೆ ಪತ್ರಿಕಾ ಏಜೆಂಟ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವ ರಾಜೇಶ್ ಬನ್ನೂರು ಅವರ ಶ್ವಾನ ಪ್ರೇಮಕ್ಕೆ ಪುತ್ತೂರಿನ ಎರಡು ಹೊಟೇಲ್ ಗಳು ಹಾಗೂ ಇಬ್ಬರು ಮುಸ್ಲಿಂ ಬಂಧುಗಳು ತಿಂಡಿ ಮತ್ತು ಇತರ ರೂಪದಲ್ಲಿ ಸಹಕಾರ ನೀಡುತ್ತಿದ್ದಾರೆ.
Luckily more than 150 street dogs of the town have a human being who takes care of them. They get food on time. The person who loves these street canines is none other than Rajesh Bannur, former president of Puttur town municipality. He was the member of town municipality for 20 long years.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm