ಬ್ರೇಕಿಂಗ್ ನ್ಯೂಸ್
08-06-21 12:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಕೋವಿಡ್ ಸೋಂಕಿತ ರೋಗಿಗಳಿಗಾಗಿ ಭಾರತ ಸರಕಾರದ ಆಯುಷ್ ಇಲಾಖೆ ಮತ್ತು ಸೆಂಟ್ರಲ್ ಕೌನ್ಸಿಲ್ ಆಫ್ ರಿಸರ್ಚ್ ಇನ್ ಆಯುರ್ವೇದ (ಸಿಸಿಆರ್ ಎಎಸ್) ಸಂಶೋಧನೆಯ ಫಲವಾಗಿ ಹೊರತಂದಿರುವ ಆಯುಷ್ 64 ಎನ್ನುವ ಔಷಧಿ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು ಕರ್ನಾಟಕ ರಾಜ್ಯದಲ್ಲಿ ಮಂಗಳೂರಿನ ವಿವೇಕ್ ಟ್ರೇಡರ್ಸ್ ವತಿಯಿಂದ ವಿತರಣೆ ಮಾಡಲಾಗುತ್ತಿದೆ.
ಈ ಬಗ್ಗೆ ನಗರದ ಕೊಡಿಯಾಲ್ ಬೈಲಿನ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕ್ ಟ್ರೇಡರ್ಸ್ ಪ್ರವರ್ತಕ ನರೇಶ್ ಶೆಣೈ ಮತ್ತು ಆಯುರ್ವೇದ ವೈದ್ಯ ಡಾ.ಹರಿಕೃಷ್ಣ ಪಾಣಾಜೆ ಅವರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದಾರೆ.

ಆಯುಷ್ 64 ಔಷಧಿಯನ್ನು ಕರ್ನಾಟಕದಲ್ಲಿ ಪುತ್ತೂರಿನ ಆಯುರ್ವೇದ ಉತ್ಪನ್ನಗಳ ಸಂಸ್ಥೆ ಎಸ್ ಡಿಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಉತ್ಪಾದಿಸಲು ಅನುಮತಿ ಪಡೆದಿದ್ದು, ಈಗಾಗ್ಲೇ ಉತ್ಪನ್ನಗಳು ರಾಜ್ಯದ ಎಲ್ಲ ಮೆಡಿಕಲ್ ಸ್ಟೋರ್ ಗಳಿಗೆ ಪೂರೈಕೆಯಾಗಿದೆ. ಇಡೀ ದೇಶದಲ್ಲಿ 9 ಕಂಪನಿಗಳಿಗೆ ಮಾತ್ರ ಆಯುಷ್ 64 ಔಷಧಿ ಉತ್ಪಾದನೆಗೆ ಲೈಸನ್ಸ್ ಸಿಕ್ಕಿದೆ. ಅದರಲ್ಲಿ ಪುತ್ತೂರಿನ ಎಸ್ ಡಿಪಿ ಸಂಸ್ಥೆಯೂ ಒಂದು ಎಂದು ನರೇಶ್ ಶೆಣೈ ಮಾಹಿತಿ ನೀಡಿದರು.
ಕೋವಿಡ್ ಪಾಸಿಟಿವ್ ಆದವರು ಈ ಔಷಧಿಯನ್ನು ಪಡೆದು ಸೋಂಕು ಮುಕ್ತರಾಗಿರುವುದನ್ನು ತಜ್ಞರು ದೃಢೀಕರಿಸಿದ್ದಾರೆ. ಕೋವಿಡ್ ಲಕ್ಷಣಗಳು ಇಲ್ಲದ ಸೋಂಕಿತರು ಅಥವಾ ಸಾಮಾನ್ಯ ಲಕ್ಷಣಗಳನ್ನು ಹೊಂದಿದವರು ಈ ಔಷಧಿಯನ್ನು ಪಡೆಯಬಹುದೆಂದು ವೈದ್ಯರು ಶಿಫಾರಸು ಮಾಡಿದ್ದಾರೆ. ಈಗಾಗ್ಲೇ ಗುಜರಾತಿನ ಅಹಮದಾಬಾದ್, ಗಾಂಧಿನಗರ, ವಡೋದರ, ಭಾವನಗರ, ಜುನಾಗಢ, ಸೂರತ್, ನರ್ಮದಾ, ವಲ್ಸಾಡ್ ನ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಆಯುಷ್ 64 ಮಾತ್ರೆಗಳನ್ನು ನೀಡಲಾಗಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ನರೇಶ್ ಶೆಣೈ ಹೇಳಿದರು.

ಅಲ್ಲದೆ, ಆಯುಷ್ 64 ಮಾತ್ರೆ ಸೇವಿಸಿದವರು ಕೋವಿಡ್ ಸೋಂಕಿನ ಅಡ್ಡಪರಿಣಾಮಗಳಾದ ನಿದ್ರಾಹೀನತೆ, ಮಾನಸಿಕ ಒತ್ತಡ, ಆತಂಕ, ಆಯಾಸ ಇನ್ನಿತರ ಅನಾರೋಗ್ಯದಿಂದ ಮುಕ್ತಿ ಹೊಂದಿರುವುದು ಕಂಡುಬಂದಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ. ಆಯುಷ್ ಮಾತ್ರೆಗಳನ್ನು ವೈದ್ಯರ ಸಲಹೆಯೊಂದಿಗೆ ಕೋವಿಡ್ ಸೋಂಕಿತರು 14 ದಿನಗಳ ಕಾಲ ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ಲಕ್ಷಣ ಇಲ್ಲದವರು ದಿನಕ್ಕೆ ಎರಡು ಸಲ ಮಾತ್ರೆಯನ್ನು ಬಿಸಿನೀರಿನ ಜೊತೆ ತೆಗೆದುಕೊಳ್ಳಬಹುದು. ಲಕ್ಷಣ ಇದ್ದವರು ದಿನಕ್ಕೆ ಮೂರರಂತೆ ಆಹಾರ ಸೇವಿಸಿದ ಬಳಿಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಹೃದಯ ಕಾಯಿಲೆ, ಮಧುಮೇಹ, ರಕ್ತದೊತ್ತಡ ಕಾಯಿಲೆ ಇದ್ದವರು ಕೂಡ ಈ ಮಾತ್ರೆಗಳನ್ನು ತೆಗೆದುಕೊಳ್ಳಬಹುದು ಎಂದು ಡಾ. ಹರಿಕೃಷ್ಣ ಪಾಣಾಜೆ ತಿಳಿಸಿದ್ದಾರೆ.
Mangalore Ayurvedic coronavirus Medicine Ayush 64 now released into Market said Naresh Shenoy during the inaugural ceremony of Covid Medicine.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm