ಬ್ರೇಕಿಂಗ್ ನ್ಯೂಸ್
08-06-21 12:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಕೋವಿಡ್ ಸೋಂಕಿತ ರೋಗಿಗಳಿಗಾಗಿ ಭಾರತ ಸರಕಾರದ ಆಯುಷ್ ಇಲಾಖೆ ಮತ್ತು ಸೆಂಟ್ರಲ್ ಕೌನ್ಸಿಲ್ ಆಫ್ ರಿಸರ್ಚ್ ಇನ್ ಆಯುರ್ವೇದ (ಸಿಸಿಆರ್ ಎಎಸ್) ಸಂಶೋಧನೆಯ ಫಲವಾಗಿ ಹೊರತಂದಿರುವ ಆಯುಷ್ 64 ಎನ್ನುವ ಔಷಧಿ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು ಕರ್ನಾಟಕ ರಾಜ್ಯದಲ್ಲಿ ಮಂಗಳೂರಿನ ವಿವೇಕ್ ಟ್ರೇಡರ್ಸ್ ವತಿಯಿಂದ ವಿತರಣೆ ಮಾಡಲಾಗುತ್ತಿದೆ.
ಈ ಬಗ್ಗೆ ನಗರದ ಕೊಡಿಯಾಲ್ ಬೈಲಿನ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕ್ ಟ್ರೇಡರ್ಸ್ ಪ್ರವರ್ತಕ ನರೇಶ್ ಶೆಣೈ ಮತ್ತು ಆಯುರ್ವೇದ ವೈದ್ಯ ಡಾ.ಹರಿಕೃಷ್ಣ ಪಾಣಾಜೆ ಅವರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದಾರೆ.

ಆಯುಷ್ 64 ಔಷಧಿಯನ್ನು ಕರ್ನಾಟಕದಲ್ಲಿ ಪುತ್ತೂರಿನ ಆಯುರ್ವೇದ ಉತ್ಪನ್ನಗಳ ಸಂಸ್ಥೆ ಎಸ್ ಡಿಪಿ ರೆಮಿಡೀಸ್ ಮತ್ತು ರಿಸರ್ಚ್ ಸೆಂಟರ್ ಉತ್ಪಾದಿಸಲು ಅನುಮತಿ ಪಡೆದಿದ್ದು, ಈಗಾಗ್ಲೇ ಉತ್ಪನ್ನಗಳು ರಾಜ್ಯದ ಎಲ್ಲ ಮೆಡಿಕಲ್ ಸ್ಟೋರ್ ಗಳಿಗೆ ಪೂರೈಕೆಯಾಗಿದೆ. ಇಡೀ ದೇಶದಲ್ಲಿ 9 ಕಂಪನಿಗಳಿಗೆ ಮಾತ್ರ ಆಯುಷ್ 64 ಔಷಧಿ ಉತ್ಪಾದನೆಗೆ ಲೈಸನ್ಸ್ ಸಿಕ್ಕಿದೆ. ಅದರಲ್ಲಿ ಪುತ್ತೂರಿನ ಎಸ್ ಡಿಪಿ ಸಂಸ್ಥೆಯೂ ಒಂದು ಎಂದು ನರೇಶ್ ಶೆಣೈ ಮಾಹಿತಿ ನೀಡಿದರು.
ಕೋವಿಡ್ ಪಾಸಿಟಿವ್ ಆದವರು ಈ ಔಷಧಿಯನ್ನು ಪಡೆದು ಸೋಂಕು ಮುಕ್ತರಾಗಿರುವುದನ್ನು ತಜ್ಞರು ದೃಢೀಕರಿಸಿದ್ದಾರೆ. ಕೋವಿಡ್ ಲಕ್ಷಣಗಳು ಇಲ್ಲದ ಸೋಂಕಿತರು ಅಥವಾ ಸಾಮಾನ್ಯ ಲಕ್ಷಣಗಳನ್ನು ಹೊಂದಿದವರು ಈ ಔಷಧಿಯನ್ನು ಪಡೆಯಬಹುದೆಂದು ವೈದ್ಯರು ಶಿಫಾರಸು ಮಾಡಿದ್ದಾರೆ. ಈಗಾಗ್ಲೇ ಗುಜರಾತಿನ ಅಹಮದಾಬಾದ್, ಗಾಂಧಿನಗರ, ವಡೋದರ, ಭಾವನಗರ, ಜುನಾಗಢ, ಸೂರತ್, ನರ್ಮದಾ, ವಲ್ಸಾಡ್ ನ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಆಯುಷ್ 64 ಮಾತ್ರೆಗಳನ್ನು ನೀಡಲಾಗಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ನರೇಶ್ ಶೆಣೈ ಹೇಳಿದರು.

ಅಲ್ಲದೆ, ಆಯುಷ್ 64 ಮಾತ್ರೆ ಸೇವಿಸಿದವರು ಕೋವಿಡ್ ಸೋಂಕಿನ ಅಡ್ಡಪರಿಣಾಮಗಳಾದ ನಿದ್ರಾಹೀನತೆ, ಮಾನಸಿಕ ಒತ್ತಡ, ಆತಂಕ, ಆಯಾಸ ಇನ್ನಿತರ ಅನಾರೋಗ್ಯದಿಂದ ಮುಕ್ತಿ ಹೊಂದಿರುವುದು ಕಂಡುಬಂದಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ. ಆಯುಷ್ ಮಾತ್ರೆಗಳನ್ನು ವೈದ್ಯರ ಸಲಹೆಯೊಂದಿಗೆ ಕೋವಿಡ್ ಸೋಂಕಿತರು 14 ದಿನಗಳ ಕಾಲ ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ಲಕ್ಷಣ ಇಲ್ಲದವರು ದಿನಕ್ಕೆ ಎರಡು ಸಲ ಮಾತ್ರೆಯನ್ನು ಬಿಸಿನೀರಿನ ಜೊತೆ ತೆಗೆದುಕೊಳ್ಳಬಹುದು. ಲಕ್ಷಣ ಇದ್ದವರು ದಿನಕ್ಕೆ ಮೂರರಂತೆ ಆಹಾರ ಸೇವಿಸಿದ ಬಳಿಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಹೃದಯ ಕಾಯಿಲೆ, ಮಧುಮೇಹ, ರಕ್ತದೊತ್ತಡ ಕಾಯಿಲೆ ಇದ್ದವರು ಕೂಡ ಈ ಮಾತ್ರೆಗಳನ್ನು ತೆಗೆದುಕೊಳ್ಳಬಹುದು ಎಂದು ಡಾ. ಹರಿಕೃಷ್ಣ ಪಾಣಾಜೆ ತಿಳಿಸಿದ್ದಾರೆ.
Mangalore Ayurvedic coronavirus Medicine Ayush 64 now released into Market said Naresh Shenoy during the inaugural ceremony of Covid Medicine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm