ಬ್ರೇಕಿಂಗ್ ನ್ಯೂಸ್
09-06-21 10:41 pm Mangaluru Correspondent ಕರಾವಳಿ
ಮಂಗಳೂರು, ಜೂನ್ 9: ಸುರತ್ಕಲ್ ಸಮೀಪದ ಸೂರಿಂಜೆ ಮತ್ತು ಕುತ್ತೆತ್ತೂರಿನಲ್ಲಿ ಭತ್ತದ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಭತ್ತದ ಬೀಜಗಳು ಮೊಳಕೆ ಹಂತದಲ್ಲಿ ಸುಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು ಎಂಆರ್ ಪಿಎಲ್ ನಿಂದ ಹರಿದು ಬಂದ ಕೆಮಿಕಲ್ ಯುಕ್ತ ನೀರು ಇದಕ್ಕೆ ಕಾರಣ ಎಂದು ಸ್ಥಳೀಯರು ಭೀತಿ ವ್ಯಕ್ತಪಡಿಸಿದ್ದಾರೆ.
ಬೊಳ್ಳಾರ ಗುತ್ತಿನ ಪ್ರಕಾಶ್ ಶೆಟ್ಟಿ ಎಂಬವರು ಕೃಷಿ ಇಲಾಖೆಯಿಂದ ಪಡೆದ ಭತ್ತವನ್ನು ಮೊಳಕೆ ಬರಿಸಿ ಬಿತ್ತನೆ ಮಾಡಿದ್ದರು. ಇನ್ನೋರ್ವ ರೈತ ತಾವೇ ಸಿದ್ಧಪಡಿಸಿದ ಭತ್ತವನ್ನು ಮೊಳಕೆ ಬರಿಸಿ ಗದ್ದೆಯಲ್ಲಿ ಬಿತ್ತಿದ್ದರು. ಇಬ್ಬರು ರೈತರು ಬಿತ್ತಿದ ಬೀಜವೂ ಸುಟ್ಟು ಹೋಗಿದ್ದು ಕಪ್ಪಾಗಿ ಹೋಗಿದೆ.

ಎಂಆರ್ ಪಿಎಲ್ ಬಳಿಯ ಮೂಡುಪದವು ಸಮೀಪ ಒಸರುವ ತ್ಯಾಜ್ಯ ನೀರು ಕುತ್ತೆತ್ತೂರು ಮೂಲಕ ಹರಿದು ಸೂರಿಂಜೆಗೆ ಬರುತ್ತದೆ. ಇದರ ಪರಿಣಾಮ ಈ ಭಾಗದಲ್ಲಿ ಕೃಷಿಗೆ ತೊಂದರೆಯಾಗಿ ರೈತರು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ. ಈಗ ಸೂರಿಂಜೆಯ ರೈತರು ಮಾಡಿದ ಕೃಷಿ ಸುಟ್ಟು ಹೋಗಿದ್ದು ಹಾಳಾಗಿದೆ.
ಇತ್ತೀಚೆಗೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಳದ ಬಳಿ ನೀರಿನಲ್ಲಿ ತೈಲದ ಅಂಶ ಕಂಡುಬಂದಿದ್ದು, ಬಾವಿ, ಕೆರೆಯ ಮೀನುಗಳು ಸತ್ತಿದ್ದವು. ಇಲ್ಲಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆದರೆ ಅದರ ಫಲಿತಾಂಶ ಇನ್ನೂ ಜನತೆಗೆ ತಿಳಿದಿಲ್ಲ ಎಂಬ ಅಸಮಾಧಾನವನ್ನು ರೈತರು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳಲ್ಲಿ ಕೇಳಿದರೆ ತಮಗೇನೂ ಗೊತ್ತಿಲ್ಲ ಎಂದು ನುಣುಚಿಕೊಳ್ಳುತ್ತಿದ್ದಾರೆ. ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯ ಕೃಷಿಕರಿಗೆ ಹಾನಿಯಾಗುತ್ತಿರುವ ಬಗ್ಗೆ ಪಂಚಾಯತ್ ನಲ್ಲಿ ಹೇಳಿಕೊಂಡರೂ, ಕೈಗಾರಿಕೆಯ ಮಾಲಿನ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಂಚಾಯತ್ ಅಧಿಕಾರಿಗಳ ಈ ರೀತಿಯ ನಿರ್ಲಕ್ಷ್ಯದಿಂದಾಗಿಯೇ ಎಂಆರ್ ಪಿಎಲ್ ಸೊಕ್ಕು ತೋರಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
MRPL Dump dirty wastewater Crops Burnt in Mangalore. The Pictures of this has gone viral on Social Media.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm