ಬ್ರೇಕಿಂಗ್ ನ್ಯೂಸ್
09-06-21 10:41 pm Mangaluru Correspondent ಕರಾವಳಿ
ಮಂಗಳೂರು, ಜೂನ್ 9: ಸುರತ್ಕಲ್ ಸಮೀಪದ ಸೂರಿಂಜೆ ಮತ್ತು ಕುತ್ತೆತ್ತೂರಿನಲ್ಲಿ ಭತ್ತದ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಭತ್ತದ ಬೀಜಗಳು ಮೊಳಕೆ ಹಂತದಲ್ಲಿ ಸುಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು ಎಂಆರ್ ಪಿಎಲ್ ನಿಂದ ಹರಿದು ಬಂದ ಕೆಮಿಕಲ್ ಯುಕ್ತ ನೀರು ಇದಕ್ಕೆ ಕಾರಣ ಎಂದು ಸ್ಥಳೀಯರು ಭೀತಿ ವ್ಯಕ್ತಪಡಿಸಿದ್ದಾರೆ.
ಬೊಳ್ಳಾರ ಗುತ್ತಿನ ಪ್ರಕಾಶ್ ಶೆಟ್ಟಿ ಎಂಬವರು ಕೃಷಿ ಇಲಾಖೆಯಿಂದ ಪಡೆದ ಭತ್ತವನ್ನು ಮೊಳಕೆ ಬರಿಸಿ ಬಿತ್ತನೆ ಮಾಡಿದ್ದರು. ಇನ್ನೋರ್ವ ರೈತ ತಾವೇ ಸಿದ್ಧಪಡಿಸಿದ ಭತ್ತವನ್ನು ಮೊಳಕೆ ಬರಿಸಿ ಗದ್ದೆಯಲ್ಲಿ ಬಿತ್ತಿದ್ದರು. ಇಬ್ಬರು ರೈತರು ಬಿತ್ತಿದ ಬೀಜವೂ ಸುಟ್ಟು ಹೋಗಿದ್ದು ಕಪ್ಪಾಗಿ ಹೋಗಿದೆ.

ಎಂಆರ್ ಪಿಎಲ್ ಬಳಿಯ ಮೂಡುಪದವು ಸಮೀಪ ಒಸರುವ ತ್ಯಾಜ್ಯ ನೀರು ಕುತ್ತೆತ್ತೂರು ಮೂಲಕ ಹರಿದು ಸೂರಿಂಜೆಗೆ ಬರುತ್ತದೆ. ಇದರ ಪರಿಣಾಮ ಈ ಭಾಗದಲ್ಲಿ ಕೃಷಿಗೆ ತೊಂದರೆಯಾಗಿ ರೈತರು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ. ಈಗ ಸೂರಿಂಜೆಯ ರೈತರು ಮಾಡಿದ ಕೃಷಿ ಸುಟ್ಟು ಹೋಗಿದ್ದು ಹಾಳಾಗಿದೆ.
ಇತ್ತೀಚೆಗೆ ಪೊನ್ನಗಿರಿ ಮಹಾಲಿಂಗೇಶ್ವರ ದೇವಳದ ಬಳಿ ನೀರಿನಲ್ಲಿ ತೈಲದ ಅಂಶ ಕಂಡುಬಂದಿದ್ದು, ಬಾವಿ, ಕೆರೆಯ ಮೀನುಗಳು ಸತ್ತಿದ್ದವು. ಇಲ್ಲಿಂದ ನೀರಿನ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಆದರೆ ಅದರ ಫಲಿತಾಂಶ ಇನ್ನೂ ಜನತೆಗೆ ತಿಳಿದಿಲ್ಲ ಎಂಬ ಅಸಮಾಧಾನವನ್ನು ರೈತರು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳಲ್ಲಿ ಕೇಳಿದರೆ ತಮಗೇನೂ ಗೊತ್ತಿಲ್ಲ ಎಂದು ನುಣುಚಿಕೊಳ್ಳುತ್ತಿದ್ದಾರೆ. ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯ ಕೃಷಿಕರಿಗೆ ಹಾನಿಯಾಗುತ್ತಿರುವ ಬಗ್ಗೆ ಪಂಚಾಯತ್ ನಲ್ಲಿ ಹೇಳಿಕೊಂಡರೂ, ಕೈಗಾರಿಕೆಯ ಮಾಲಿನ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಪಂಚಾಯತ್ ಅಧಿಕಾರಿಗಳ ಈ ರೀತಿಯ ನಿರ್ಲಕ್ಷ್ಯದಿಂದಾಗಿಯೇ ಎಂಆರ್ ಪಿಎಲ್ ಸೊಕ್ಕು ತೋರಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
MRPL Dump dirty wastewater Crops Burnt in Mangalore. The Pictures of this has gone viral on Social Media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm