ಬ್ರೇಕಿಂಗ್ ನ್ಯೂಸ್
10-06-21 05:51 pm Udupi Correspondent ಕರಾವಳಿ
ಉಡುಪಿ, ಜೂನ್ 10: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಪದ್ದು ಬಂಗೇರಾ (74) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈನಲ್ಲಿ ನೆಲೆಸಿದ್ದ ಶೇಖರ್ ಬಂಗೇರ ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಉಡುಪಿ ತಾಲೂಕಿನ ಬಡಾನಿಡಿಯೂರು ಮೂಲದ ಬಂಗೇರ ಅವರಿಗೆ ಕೋವಿಡ್ ಸೋಂಕು ತಗಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.


ಚಿಕ್ಕಂದಿನಲ್ಲೇ ಮುಂಬೈಗೆ ತೆರಳಿ ಜೀವನ ರೂಪಿಸಿದ್ದ ಶೇಖರ್ ಬಂಗೇರ ಫುಟ್ಬಾಲ್ ಆಟದಲ್ಲಿ ಮಿಂಚು ಹರಿಸಿದ್ದರು. ಎಂಬತ್ತರ ದಶಕದಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ, ಗೋಲ್ ಕೀಪರ್ ಮತ್ತು ನಾಯಕನಾಗಿಯೂ ಗಮನ ಸೆಳೆದಿದ್ದರು. ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿ ಹಲವು ಫುಟ್ಬಾಲ್ ಕ್ಲಬ್ ಗಳಿಗೆ ಕೋಚ್ ಆಗಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ವಿಕ್ಟೋರಿಯಾ ಫುಟ್ಬಾಲ್ ಅಕಾಡೆಮಿಯ ಟ್ರಸ್ಟಿ ಕ್ಲೈವ್ ನೋಲನ್ ಮಸ್ಕರೇನಸ್ ಮತ್ತು ತರಬೇತುದಾರ ಮಿಲನ್ ಸೇರಿದಂತೆ ಸಂಬಂಧಿಕರು ಮತ್ತು ಸೀಮಿತ ಸಂಖ್ಯೆಯ ಅಭಿಮಾನಿಗಳು ಅಂತ್ಯದ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
Shekhar Paddu Bangera (74), former captain of the Indian football team, fell victim to a coronavirus infection on Thursday, June 10. Bangera had recently been infected with the disease. He was admitted into Mahesh Hospital Brahmavar for treatment. But the treatments failed to save his life.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm