ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm