ಬ್ರೇಕಿಂಗ್ ನ್ಯೂಸ್
11-06-21 03:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 11; ಪಕ್ಕದ ಉಡುಪಿ ಜಿಲ್ಲೆಯಲ್ಲಿ ಲಾಕ್ಡೌನ್ ತೆರವಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಇನ್ನೂ ಕಡಿಮೆಯಾಗಿಲ್ಲ. ಪಾಸಿಟಿವ್ ಪ್ರಮಾಣ ಇಳಿಕೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮತ್ತು ಜಿಲ್ಲೆಯಾದ್ಯಂತ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ.
ಇದಲ್ಲದೆ ನಗರ ಭಾಗದಲ್ಲೂ ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಜನರಲ್ಲಿ ಪಾಸಿಟಿವ್ ಪತ್ತೆಯಾದರೂ ಮೂರು ಮಹಡಿಗಳ ನಿವಾಸಿಗಳ ಟೆಸ್ಟಿಂಗ್ ಮಾಡುವಂತೆ ಸೂಚಿಸಲಾಗಿದೆ. ಸೋಂಕಿತರು ವಾಸಿಸುವ ಮಹಡಿ, ಅದರ ಮೇಲಿನ ಮತ್ತು ಕೆಳಗಿನ ಮಹಡಿಗಳಲ್ಲಿ ವಾಸವಾಗಿರುವ ಎಲ್ಲರಿಗೂ ಟೆಸ್ಟ್ ಮಾಡಬೇಕು.


ಇದರ ಜೊತೆಗೆ ಮನೆ ಮತ್ತು ಅಪಾರ್ಟ್ಮೆಂಟ್ಗಳ ಸುತ್ತ ಕಣ್ಗಾವಲು ಕ್ರಮಕ್ಕೆ ಜಿಲ್ಲಾಧಿಕಾರಿ ಗಳು ಸೂಚನೆ ನೀಡಿದ್ದಾರೆ. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರು ಮೊಬೈಲ್ ಕೋವಿಡ್ ಟೆಸ್ಟಿಂಗ್ ತಂಡಗಳನ್ನು ರಚಿಸಲಾಗಿದೆ. ಒಂದರಲ್ಲಿ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಮನೆ ಮತ್ತು ಖಾಸಗಿ ಕ್ಲಿನಿಕ್ಗಳಿಗೆ ತೆರಳಿ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಬೇರೆ ಬೇರೆ ಭಾಗಗಳಲ್ಲೂ ಮೊಬೈಲ್ ಟೆಸ್ಟಿಂಗ್ ಲ್ಯಾಬ್ಗಳನ್ನು ತೆರೆಯಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ. ಸದ್ಯ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 3,500 ಮಾದರಿಗಳ ಪರೀಕ್ಷೆ ಆಗುತ್ತಿದೆ.
ಇನ್ನು ಮುಂದೆ ನಿತ್ಯ 6 ಸಾವಿರ ಪರೀಕ್ಷೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಎಲ್ಲಾ ಸೋಂಕಿತರ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Spike in Covid Cases in Mangaluru daily six thousand tests to be conducted states Dc Dr. Rajendra Kumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm