ಬ್ರೇಕಿಂಗ್ ನ್ಯೂಸ್
11-06-21 08:48 pm Mangaluru Correspondent ಕರಾವಳಿ
ಮಂಗಳೂರು, ಜೂನ್ 11: ಉತ್ರ ಕರ್ನಾಟಕದಾಗೆ ಯಾವ್ ಕಡಿಗ್ ಹೋದ್ರೂ ನಿಮ್ಗೆ ರೊಟ್ಟಿ ಊಟಾನೇ ಸಿಗಾದ್. ಕರಾವಳಿ ಮ್ಯಾಗಾದ್ ಕುಚಲಕ್ಕಿ, ಬೆಂಗ್ಲೂರು ಬಾಗದ್ ಮೊಸರನ್ನ ಏನೂ ಸಿಗಲ್ರೀ.. ಆದ್ರ, ಕರಾವಳಿ ಕಡೀ ಬಂದ್ರಾ ಕಡಾಕ್ ರೊಟ್ಟಿ ಊಟನೇ ಸಿಗಂಗಿಲ್ರೀ.. ಈಗ್ ನೋಡಿದ್ರ ಈ ಕಡೀಗ್ ಪೂರ್ತಿ ಉತ್ರ ಕರ್ನಾಟಕ ಮಂದಿಯೇ. ಪೊಲೀಸ್ ಮ್ಯಾಗೆ ನೋಡಿದ್ರೆ 90 ಪರ್ಸೆಂಟ್ ಉತ್ರಾದ್ ಮಂದಿನೇ ಇದಾರಪ್ಪಾ.. ಮಂದಿ ಏನ್ ಹೇಳ್ತಾರೋ, ಈ ಉತ್ರಾದ್ ಮಂದೀಗ್ ಉಡುಪಿ, ಮಂಗ್ಲೂರ್ ಬಂದ್ರಾ ಯಾವ್ ಕಡಿನೂ ರೊಟ್ಟಿ ಊಟ ಸಿಗಾಂಗಿಲ್ಲ ನೋಡಿ.. ಡಿಪಾರ್ಟ್ಮೆಂಟ್ ಕಡೀಗ್ ಬ್ಯಾಚಿಲರ್ ಆದಾರ್ ಗತಿ ಗೋವಿಂದಾ.. ಯಾಕಂತೀರೀ.. ಈ ಉತ್ರಾದ್ ಮ್ಯಾಗ್ ರೊಟ್ಟಿ ಊಟಾನೇ ಬಾಡೂಟಾರೀ..

ಲಾಕ್ಡೌನ್ ಹೇರ್ದಾಂಗ್ ಡಿಪಾರ್ಟ್ಮೆಂಟ್ ಮಂದೀಗ್ ಕಮಿಷನರ್ ಸಾಹೇಬ್ರ ಕಚೇರ್ ಮೈದಾನಾನೇ ಊಟ. ಅಲ್ಲೇ ತಿಂಡಿ, ಅದೇ ಮ್ಯಾಗ್ ಊಟಾ. ನಾರ್ತ್ ಮಂದಿಯಾಗ್ ಪೂರ್ತಿ ಮದ್ಯಾನ, ರಾತ್ರಿಯೆಲ್ಲಾ ಇಲ್ಲೇ ಊಟ ಮಾಡ್ತಾರ್ರೀ.. ಯಾಕಂದ್ರ, ಇಲ್ಲೇ ಊಟ ತಯಾರಾಗಾತ್ ಮಂದೀಗ್. ಆದ್ರಾ ಬರೀ ಅನ್ನ ಸಾರು, ಪುಲಾವ್, ಬೇಲೆ ಬಾತ್ ಹೀಗಾ ಡೈಲಿ ತಿಂದ್ಬಿಟ್ಟು ಜಡ ಆಗ್ಯಾತ್.. ಇದ್ಕಾ ಈವಾತ್ ತಮ್ ಫ್ಯಾಮಿಲಿ ಕಡೀಂದ್ ರೊಟ್ಟಿ ಮಾಡ್ಸಿಕಂಡ್ ಬಂದ್ ಊಟಾ ಕೊಟ್ಟಾರ್ರೀ... ಖಡಾಕ್ ರೊಟ್ಟಿ, ಸಾದಾ ರೊಟ್ಟಿ, ಅದ್ಕ ಶೇಂಗಾ ಚಟ್ನಿ, ಮೊಸರು, ಮೆಂತಿ ಸೊಪ್ಪು, ಕ್ಯಾರೆಟ್, ಮೂಲಂಗಿ ಪೀಸ್, ಬದ್ನಿ ಗೊಜ್ಜು, ಹೆಸ್ರು ಕಾಳಾಗ್ ಮಾಡಿದ್ ಗಸಿ.. ಸೂಪರ್ ಆಗಿತ್ರೀ..


ಹೌದು.. ಇಂದು ನಗರದ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಮೈದಾನದಲ್ಲಿ ಪೊಲೀಸರಿಗೆ ಬಾಡೂಟ ಇತ್ತು. ಅಂದ್ರೆ, ಉತ್ತರ ಕರ್ನಾಟಕದ ಶೈಲಿಯ ಖಡಕ್ ರೊಟ್ಟಿ ಊಟ.. ಈಗ ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಕೂಡ ಹೆಚ್ಚು ಮಂದಿ ಇರೋರು ಉತ್ತರ ಕರ್ನಾಟಕದವರೇ. ಅವರಿಗೆ ರೊಟ್ಟಿ ಊಟ ಅಂದ್ರೇನೆ ಬಾಡೂಟ.. ಇಂದು ತಮ್ಮ ಉತ್ತರದ ಪೊಲೀಸರಿಗೆಲ್ಲ ಭಾರೀ ಖುಷಿಯಾಗಿತ್ತು. ತಮ್ಮ ಕುಟುಂಬಸ್ಥರು ಮತ್ತು ಸ್ನೇಹಿತರ ಕಡೆಯಿಂದ ಮಾಡಿಸ್ಕೊಂಡು ತಂದಿದ್ದ ರೊಟ್ಟಿ ಮತ್ತು ಅದರ ಪಲ್ಯವನ್ನು ಇಲ್ಲಿನ ಮಂದಿಗೂ ಕೊಟ್ಟಿದ್ರು. ಜೊತೆಗೆ, ಮಾಧ್ಯಮದ ಮಂದಿಗೂ ಕೊಡಿಸಿ ರುಚಿ ತೋರಿಸಿದ್ರು.

ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಮ್ ಶಂಕರ್ ಸೇರಿ ಎಲ್ಲಾರು ಸೇರಿ ಗಡದ್ ಊಟ ಮಾಡಿದ್ರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಮಿಷನರ್, ಉತ್ರದ ಮಂದಿ ತುಂಬಾನೇ ಇರೋದ್ರಿಂದ ರೊಟ್ಟಿ ಊಟ ಮಾಡ್ಬೇಕು ಅಂತಿದ್ರು. ಮಾಡ್ರೀಯಪ್ಪಾ ಅಂದಿದ್ದೆ.. ಅದ್ಕೆ ಇಂದು ರೊಟ್ಟಿ ಊಟ ಮಾಡಿಸಿದ್ದಾರೆ. ತಮ್ಮ ಫ್ಯಾಮಿಲಿ ಕಡೆಯಿಂದ್ಲೇ ರೊಟ್ಟಿ ಮಾಡಿಸಿದಾರೆ. ಒಟ್ಟು 1500 ರೊಟ್ಟಿ ಮಾಡಿದ್ದಾರೆ. ಜೊತೆಗೆ, ಇಬ್ಬರು ಮಹಿಳೆಯರನ್ನು ಕರೆಸಿ ರೊಟ್ಟಿನೂ ಸ್ಪಾಟಲ್ಲೇ ತಯಾರಿಸಿದ್ದಾರೆ ಎಂದು ಹೇಳಿದ್ರು.
ಉತ್ತರ ಕರ್ನಾಟಕ ಭಾಗದವರೇ ಆದ ಸಿಎಆರ್ ಎಸಿಪಿ ಆಗಿರೋ ಉಪಾಸೆ ಕೂಡ ತಮ್ಮ ಅಭಿಪ್ರಾಯ ಹಂಚ್ಕೊಂಡ್ರು. ಇಲ್ಲಿ ಮಾಂಸದ ಬಾಡೂಟದಂತೆ ನಮ್ಗೆ ರೊಟ್ಟಿ ಊಟ. ರೊಟ್ಟಿ ಜೊತೆಗೆ ಬದ್ನಿಕಾಯಿ ಪಲ್ಯ, ಚಟ್ನಿ ಕೊಟ್ಟಾಂಗ್ ನಮ್ಗ ಚಲೋ ಆತ್ರೀ.. ಫ್ಯಾಮಿಲಿ ಕಡೆ ಏನಾದ್ರ ಫಂಕ್ಷನ್ ಇದ್ರೆ ರೊಟ್ಟಿ ಊಟಾನೇ. ಅದರ ಮೇಲ್ ಇಲ್ರೀ ಎಂದ್ರು.
Mangalore Police Commissioner Shashi Kumar arranged North Karnataka food for Police Personals today as most of them in service in Mangaluru are from North Karnataka.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm