ಬ್ರೇಕಿಂಗ್ ನ್ಯೂಸ್
12-06-21 04:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಅಸಂಘಟಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿಯಲ್ಲಿರುವ ಮಂದಿಗೆ ರಾಜ್ಯ ಸರಕಾರದ ಪರಿಹಾರ ಪ್ಯಾಕೇಜ್ ಕೈಗೆಟಕದಂತಾಗಿದೆ. ಟೈಲರ್ ಕೆಲಸ ಮಾಡುವ ಮಂದಿ ತಾವು ಅಸಂಘಟಿತ ಕಾರ್ಮಿಕರು ಎಂದು ತೋರಿಸಲು ಸರಕಾರ ಸೂಚಿಸಿದ ಅಧಿಕಾರಿಗಳ ಬಳಿ ತೆರಳಿದರೆ, ನೀವು ಲೈಸೆನ್ಸ್ ಮಾಡಿದ್ದೀರಾ ಎಂದು ಕೇಳುತ್ತಾರೆ. ನಾವು ಮನೆಯಲ್ಲೇ ಕೆಲಸ ಮಾಡುವುದಾಗಿ ಹೇಳಿದರೂ ವಾಪಸ್ ಕಳುಹಿಸುತ್ತಾರೆ. ಇದರಿಂದಾಗಿ ಟೈಲರ್ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಅನ್ನೋದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು ಈ ಕುರಿತ ಗೊಂದಲವನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆನಂದ ಕೆ.ಎಸ್. ಸರಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕೋವಿಡ್ನಿಂದಾಗಿ ಟೈಲರ್ಗಳು ಅಂಗಡಿ ಬಾಗಿಲು ತೆರೆಯದೆ ಮನೆಯಲ್ಲಿಯೇ ಉಳಿಯುವಂತಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸರಕಾರ ಘೋಷಣೆ ಮಾಡಿದ ಪ್ಯಾಕೇಜ್ ಮೊತ್ತ ಎರಡು ಸಾವಿರ ರೂಪಾಯಿಯನ್ನು ಪಡೆಯಲು ಎಪಿಎಲ್ ಮತ್ತು ಬಿಪಿಎಲ್ ಎಂಬ ಮಾನದಂಡವನ್ನು ನಿಗದಿ ಪಡಿಸಿರುವುದು ತಪ್ಪು. ಇದು ಟೈಲರ್ ವೃತ್ತಿ ಬಾಂಧವರಲ್ಲಿ ತಾರತಮ್ಯ ಮಾಡಿದಂತಾಗಿದೆ. ಸರಕಾರ ಈ ನಿಯಮವನ್ನು ಕೈಬಿಟ್ಟು ಎಲ್ಲಾ ಟೈಲರ್ ಗಳಿಗೂ ಪ್ಯಾಕೇಜ್ ಮೊತ್ತ ನೀಡುವಂತೆ ಅವರು ಒತ್ತಾಯಿಸಿದರು.

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ (ಕೆಎಸ್ಟಿಎ) ಕಳೆದ 21 ವರ್ಷಗಳಿಂದ ಟೈಲರ್ ವೃತ್ತಿಯವರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಸಂಘವನ್ನು ವಿಶ್ವಾಸಕ್ಕೆ ಪಡೆದು ಸಂಘಟನೆಯ ಗುರುತು ಕಾರ್ಡ್ ತೋರಿಸಿದರೆ ಅಧಿಕಾರಿಗಳು ಮಾನ್ಯತೆ ನೀಡಿ, ಪ್ಯಾಕೇಜ್ ಮೊತ್ತ ಪಡೆಯಲು ಸಹಕರಿಸಬೇಕು. ಈ ಬಗ್ಗೆ ಸರಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಕೆಎಸ್ ಟಿಎ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಮಾತನಾಡಿ, ಸರಕಾರ ಟೈಲರ್ಗಳಿಗೆ ಘೋಷಿಸಿರುವ ಪ್ಯಾಕೇಜ್ ಮೊತ್ತವನ್ನು ಎರಡು ಸಾವಿರದಿಂದ ಐದು ಸಾವಿರಕ್ಕೆ ಏರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಕೆಎಸ್ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ. ವಸಂತ್, ನಗರ ಸಮಿತಿ ಮಾಜಿ ಅಧ್ಯಕ್ಷೆ ಕುಸುಮ ದೇವಾಡಿಗ ಉಪಸ್ಥಿತರಿದ್ದರು.
Mangalore No govt package for tailors association slams govt. We request the govt to consider us as categories of people who are also in distress on account of lockdown.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm