ಬ್ರೇಕಿಂಗ್ ನ್ಯೂಸ್
12-06-21 04:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಅಸಂಘಟಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿಯಲ್ಲಿರುವ ಮಂದಿಗೆ ರಾಜ್ಯ ಸರಕಾರದ ಪರಿಹಾರ ಪ್ಯಾಕೇಜ್ ಕೈಗೆಟಕದಂತಾಗಿದೆ. ಟೈಲರ್ ಕೆಲಸ ಮಾಡುವ ಮಂದಿ ತಾವು ಅಸಂಘಟಿತ ಕಾರ್ಮಿಕರು ಎಂದು ತೋರಿಸಲು ಸರಕಾರ ಸೂಚಿಸಿದ ಅಧಿಕಾರಿಗಳ ಬಳಿ ತೆರಳಿದರೆ, ನೀವು ಲೈಸೆನ್ಸ್ ಮಾಡಿದ್ದೀರಾ ಎಂದು ಕೇಳುತ್ತಾರೆ. ನಾವು ಮನೆಯಲ್ಲೇ ಕೆಲಸ ಮಾಡುವುದಾಗಿ ಹೇಳಿದರೂ ವಾಪಸ್ ಕಳುಹಿಸುತ್ತಾರೆ. ಇದರಿಂದಾಗಿ ಟೈಲರ್ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಅನ್ನೋದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು ಈ ಕುರಿತ ಗೊಂದಲವನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆನಂದ ಕೆ.ಎಸ್. ಸರಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕೋವಿಡ್ನಿಂದಾಗಿ ಟೈಲರ್ಗಳು ಅಂಗಡಿ ಬಾಗಿಲು ತೆರೆಯದೆ ಮನೆಯಲ್ಲಿಯೇ ಉಳಿಯುವಂತಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸರಕಾರ ಘೋಷಣೆ ಮಾಡಿದ ಪ್ಯಾಕೇಜ್ ಮೊತ್ತ ಎರಡು ಸಾವಿರ ರೂಪಾಯಿಯನ್ನು ಪಡೆಯಲು ಎಪಿಎಲ್ ಮತ್ತು ಬಿಪಿಎಲ್ ಎಂಬ ಮಾನದಂಡವನ್ನು ನಿಗದಿ ಪಡಿಸಿರುವುದು ತಪ್ಪು. ಇದು ಟೈಲರ್ ವೃತ್ತಿ ಬಾಂಧವರಲ್ಲಿ ತಾರತಮ್ಯ ಮಾಡಿದಂತಾಗಿದೆ. ಸರಕಾರ ಈ ನಿಯಮವನ್ನು ಕೈಬಿಟ್ಟು ಎಲ್ಲಾ ಟೈಲರ್ ಗಳಿಗೂ ಪ್ಯಾಕೇಜ್ ಮೊತ್ತ ನೀಡುವಂತೆ ಅವರು ಒತ್ತಾಯಿಸಿದರು.

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ (ಕೆಎಸ್ಟಿಎ) ಕಳೆದ 21 ವರ್ಷಗಳಿಂದ ಟೈಲರ್ ವೃತ್ತಿಯವರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಸಂಘವನ್ನು ವಿಶ್ವಾಸಕ್ಕೆ ಪಡೆದು ಸಂಘಟನೆಯ ಗುರುತು ಕಾರ್ಡ್ ತೋರಿಸಿದರೆ ಅಧಿಕಾರಿಗಳು ಮಾನ್ಯತೆ ನೀಡಿ, ಪ್ಯಾಕೇಜ್ ಮೊತ್ತ ಪಡೆಯಲು ಸಹಕರಿಸಬೇಕು. ಈ ಬಗ್ಗೆ ಸರಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಕೆಎಸ್ ಟಿಎ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಮಾತನಾಡಿ, ಸರಕಾರ ಟೈಲರ್ಗಳಿಗೆ ಘೋಷಿಸಿರುವ ಪ್ಯಾಕೇಜ್ ಮೊತ್ತವನ್ನು ಎರಡು ಸಾವಿರದಿಂದ ಐದು ಸಾವಿರಕ್ಕೆ ಏರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಕೆಎಸ್ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ. ವಸಂತ್, ನಗರ ಸಮಿತಿ ಮಾಜಿ ಅಧ್ಯಕ್ಷೆ ಕುಸುಮ ದೇವಾಡಿಗ ಉಪಸ್ಥಿತರಿದ್ದರು.
Mangalore No govt package for tailors association slams govt. We request the govt to consider us as categories of people who are also in distress on account of lockdown.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm