ಬ್ರೇಕಿಂಗ್ ನ್ಯೂಸ್
12-06-21 05:39 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ್ದರೂ, ಕೇಂದ್ರ ಸರಕಾರ ಪೆಟ್ರೋಲ್ ದರದ ನೆಪದಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಇದನ್ನು ವಿರೋಧಿಸಿ ಜೂನ್ 14ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ಮಾಜಿ ಎಂಎಲ್ಸಿ ಐವನ್ ಡಿಸೋಜ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಐವಾನ್ ಡಿಸೋಜ, ಪೆಟ್ರೋಲ್ ದರ ಇತಿಹಾಸದಲ್ಲೇ ಅತ್ಯಂತ ಗರಿಷ್ಠ ಮಟ್ಟಕ್ಕೆ ತಲುಪಿದೆ. ಲೀಟರಿಗೆ 100 ರೂ. ದಾಟಿ ಮುನ್ನಡೆದಿದ್ದರೂ, ಕೇಂದ್ರ ಸರಕಾರ ಸಾಮಾನ್ಯ ಜನರನ್ನು ಮೂರ್ಖರನ್ನಾಗಿಸುವ ಕೆಲಸ ಮಾಡುತ್ತಿದೆ. ದೇಶದ ಅಭಿವೃದ್ಧಿಗಾಗಿ ಸಹಿಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ತೈಲ ಬೆಲೆಯಲ್ಲಿ ನಿರಂತರ ಹೆಚ್ಚಳ ಆಗುತ್ತಿರುವುದು ಸಮಾಜದ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಹಿಂದೆ ಯುಪಿಎ ಸರಕಾರ ಇದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ತೈಲಕ್ಕೆ 140 ಡಾಲರ್ ಆಗಿದ್ದರೂ, ದೇಶದಲ್ಲಿ ಪೆಟ್ರೋಲ್ ಲೀಟರ್ ದರ 70 ರೂಪಾಯಿಗಿಂದ ಮೇಲೆ ಹೋಗಿರಲಿಲ್ಲ. ಆದರೆ, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಕಡಿಮೆ ಇದ್ದರೂ, ಪೆಟ್ರೋಲ್ ದರ ನೂರು ದಾಟಿದೆ. ಬಡವರು, ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದವರು ಮಾತ್ರ ಈ ರೀತಿ ದರ ಹೆಚ್ಚಿಸುತ್ತಾರೆ ಎಂದು ಟೀಕಿಸಿದರು.


ಈಗ ಕೊರೊನಾ ಲಾಕ್ಡೌನ್ ಸಂಕಷ್ಟದಿಂದಾಗಿ ಸಾಮಾನ್ಯ ಜನರು ಹಣ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಸ್ಥಿತಿಯಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ದರವನ್ನು ಏರಿಸುತ್ತಿರುವುದು ಏನನ್ನು ಸೂಚಿಸುತ್ತದೆ. ನಮ್ಮ ಜನರು ಮೂರ್ಖರು ಅಂದ್ಕೊಂಡಿದ್ದಾರೆಯೇ.. ಸರಕಾರದ ಈ ರೀತಿಯ ನಿರ್ಲಜ್ಜ ಧೋರಣೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ವಿರೋಧಿಸಿ ಜೂನ್ 14ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಿಂದ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.
ಪ್ರಧಾನಿ ಮೋದಿಯವರು ಕೊರೊನಾ ಓಡಿಸಲು ಕ್ಯಾಂಡಲ್ ಉರಿಸಲು, ತಪ್ಪಾಳೆ ಹೊಡೆಯಲು ಮತ್ತು ತಟ್ಟೆ ಬಡಿಯಲು ಹೇಳಿದ್ದರು. ನಾವು ಅವರ ಮಾತನ್ನು ಪ್ರತಿಭಟನೆಯಲ್ಲಿ ಯಥಾವತ್ ಪಾಲನೆ ಮಾಡುತ್ತೇವೆ. ತಟ್ಟೆ ಬಡಿದು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ ಎಂದು ಐವಾನ್ ಡಿಸೋಜ ಹೇಳಿದರು. ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಸಾಹುಲ್ ಹಮೀದ್, ಮಹಮ್ಮದ್ ಕುಂಜತ್ ಬೈಲ್, ಅಪ್ಪಿ, ಶುಭೋದಯ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
District Congress led by former MLC Ivan D’Souza will carry out a padayatra from Mallikatte Congress office to Rao & Rao Circle petrol pump on Monday, June 14 protesting against the central government over rising fuel prices.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm