ಬ್ರೇಕಿಂಗ್ ನ್ಯೂಸ್
12-06-21 10:07 pm Mangaluru Correspondent ಕರಾವಳಿ
ಉಡುಪಿ, ಜೂನ್ 12: ದೇಶದಲ್ಲಿ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದೆ. ಕಾಂಗ್ರೆಸ್ ನಾಯಕರು ದೇಶದ್ರೋಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ 370 ವಿಧಿ ಮರಳಿಸುವುದಾಗಿ ಹೇಳಿರುವ ದಿಗ್ವಿಜಯ್ ಸಿಂಗ್ ಒಬ್ಬ ದೇಶದ್ರೋಹಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಶ್ಮೀರದ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ಸೇ ಕಾರಣ. 370ನೇ ವಿಧಿಯ ವಿರುದ್ಧ ಇಡೀ ದೇಶ ಕೂಗಿದರೂ ಕಾಂಗ್ರೆಸಿಗೆ ಕೇಳಲಿಲ್ಲ. ಮೋದಿಯವರ ಸರ್ಕಾರ 370ನೇ ವಿಧಿಯನ್ನು ರದ್ದುಮಾಡಿ ಕಾಶ್ಮೀರ ನಮ್ಮದು ಎಂದಿದೆ. ಈಗ ಕಾಶ್ಮೀರ ಶಾಂತವಾಗಿದೆ, ಜನಜೀವನ ಸಾಮಾನ್ಯವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ 370ನೇ ವಿಧಿ ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಹೇಳಿಕೆಯೋ ಅಥವಾ ದಿಗ್ವಿಜಯಸಿಂಗ್ ವೈಯಕ್ತಿಕ ಹೇಳಿಕೆಯೋ ಎಂದು ಅದರ ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಸಬೇಕು. ವೈಯಕ್ತಿಕ ಹೇಳಿಕೆಯಾದರೆ ತಕ್ಷಣ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.


ಕಾಂಗ್ರೆಸ್ ಪಕ್ಷ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ಕೊಡುತ್ತಾ ಬಂದಿದೆ. ಆವತ್ತು ರಾಹುಲ್ ಗಾಂಧಿ ಕೂಡ ಕಾಶ್ಮೀರದ ಬಗ್ಗೆ ಇದೇ ಅಭಿಪ್ರಾಯದಲ್ಲಿ ಟ್ವೀಟ್ ಮಾಡಿದ್ದರು. ಅದೇ ಟ್ವೀಟ್ ನ್ನು ಪಾಕಿಸ್ತಾನ ಕೂಡ ಪ್ರಸ್ತಾಪ ಮಾಡಿತ್ತು. ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎನ್ನುವ ರೀತಿ ರಾಹುಲ್ ಗಾಂಧಿ ತೋರಿಸಿದ್ದರು. ದೆಹಲಿಯ ಕುರ್ಚಿಯನ್ನು ಹಿಡಿಯಲು ದೇಶದ ಯಾವುದೇ ಭಾಗವನ್ನು ಬಿಟ್ಟು ಕೊಡುತ್ತೀರಾ ಕಾಂಗ್ರೆಸಿಗರೇ ? ನಿಮ್ಮದು ರಾಷ್ಟ್ರೀಯ ಕಾಂಗ್ರೆಸ್ ಅಲ್ಲ ದೇಶವಿರೋಧಿ ಕಾಂಗ್ರೆಸ್. ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು. ದಿಗ್ವಿಜಯ್ ಹೇಳಿರುವುದು ಪಕ್ಷದ ನಿಲುವು ಅಲ್ಲ ಅಂತಾದರೆ ಪಕ್ಷದಿಂದ ಉಚ್ಚಾಟಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ನಿಲುವು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶೋಭಾಕರಂದ್ಲಾಜೆ ಆಗ್ರಹಿಸಿದ್ದಾರೆ.
Udupi MP Shobha Karandlaje hits out after Congress leader Digvijaya Singh’s comments in a clubhouse conversation that the revocation of Article 370 and stripping Jammu and Kashmir of statehood was an “extremely sad” decision and his party will have a “relook” at the issue have triggered a row, with the BJP accusing him of speaking against India and in agreement with Pakistan.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm