ಬ್ರೇಕಿಂಗ್ ನ್ಯೂಸ್
            
                        30-08-20 08:49 pm Headline Karnataka News Network ಕರಾವಳಿ
            ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm