ಬ್ರೇಕಿಂಗ್ ನ್ಯೂಸ್
14-06-21 11:49 am Mangalore Correspondent ಕರಾವಳಿ
ಮಂಗಳೂರು, ಜೂನ್ 14 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 17 ಗ್ರಾಮ ಪಂಚಾಯತ್ ಗಳನ್ನು ಜೂನ್ 14 ರಿಂದ ಜೂನ್ 21ರ ವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ. ಆದರೆ, ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗದ ಕಾರಣ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಪಾಸಿಟಿವ್ ದರ ಕಡಿಮೆ ಮಾಡುವ ಉದ್ದೇಶದಿಂದ 50ಕ್ಕಿಂತ ಹೆಚ್ಚು ಪ್ರಕರಣಗಳಿರುವ ಗ್ರಾಮಗಳನ್ನು ಸೀಲ್ಡೌನ್ ಮಾಡಲು ನಿರ್ಧರಿಸಲಾಗಿತ್ತು. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಿರುವ ಗ್ರಾಮ ಪಂಚಾಯತಿಗಳ ಬಗ್ಗೆ ಟಾಸ್ಕ್ಫೋರ್ಸ್ ನೀಡಿರುವ ವರದಿ ಆಧರಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಜೂನ್ 21ರ ಬೆಳಗ್ಗೆ 9 ಗಂಟೆ ವರೆಗೆ ಏಳು ದಿನಗಳ ಕಾಲ 17 ಗ್ರಾಪಂಗಳಲ್ಲಿ ಸೀಲ್ಡೌನ್ ಇರಲಿದೆ. ಈ ವೇಳೆ ಗ್ರಾಮಗಳಿಗೆ ಹೊರಗಿನ ಯಾರು ಕೂಡ ಬರುವಂತಿಲ್ಲ. ಜೊತೆಗೆ ಗ್ರಾಮದಿಂದ ಹೊರ ಹೊಗುವುದನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ ಕೆಎಂಎಫ್ ಹಾಲಿನ ಬೂತ್, ಪೆಟ್ರೋಲ್ ಬಂಕ್ ತೆರೆಯಲು ಮತ್ತು ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ.

ಮಂಗಳೂರು ತಾಲೂಕಿನ ನೀರುಮಾರ್ಗ ಮತ್ತು ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೆಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯ್ಲ, ಉಜಿರೆ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಸವಣೂರು ಗ್ರಾಮ ಪಂಚಾಯತಿಗಳು ಜಿಲ್ಲಾಧಿಕಾರಿ ಆದೇಶದಂತೆ ಸೀಲ್ ಡೌನ್ ಆಗಲಿದೆ.
Complete seal down will be enforced in 17-gram panchayats of Dakshina Kannada district from June 14 to 21. The gram panchayats where there are more than 50 active Covid-19 cases will go for complete seal down.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm