ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm