ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm