ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm