ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.
ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm