ಬ್ರೇಕಿಂಗ್ ನ್ಯೂಸ್
15-06-21 12:02 pm Mangalore Correspondent ಕರಾವಳಿ
ಮುಲ್ಕಿ, ಜೂನ್ 15 : ಇಲ್ಲಿನ ಐಕಳ ಬಳಿಯ ಉಳೆಪಾಡಿ ಪುರಂಜ ಗುಡ್ಡೆ ಎಂಬಲ್ಲಿ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಧವ ಆಚಾರ್ಯ (55) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಭಾರಿ ಮಳೆ ಗಾಳಿಯಿಂದ ಮಾಧವ ಆಚಾರ್ಯ ಮನೆಗೆ ಮರದ ಗೆಲ್ಲು ಬಿದ್ದಿದ್ದು ವಿದ್ಯುತ್ ಅಸ್ತವ್ಯಸ್ತ ಗೊಂಡಿತ್ತು. ಈ ಬಗ್ಗೆ ಕಿನ್ನಿಗೋಳಿ ಮೆಸ್ಕಾಂ ಸಿಬಂದಿಗೆ ಸಂಪರ್ಕಿಸಿದಾಗ ಅವರು ಮರದ ಗೆಲ್ಲು ಕಡಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅದರಂತೆ ಮನೆಯವರು ಮರ ಕಡಿದಿದ್ದು, ಭಾನುವಾರ ಕಿನ್ನಿಗೋಳಿ ಮೆಸ್ಕಾಂ ಸಿಬ್ಬಂದಿ ಬಂದು ತಾತ್ಕಾಲಿಕ ನೆಲೆಯಲ್ಲಿ ಮನೆಯೆದುರಿನ ಭಾಗದಲ್ಲಿ ವಿದ್ಯುತ್ ವಯರ್ ಗಳನ್ನು ಸಿಕ್ಕಿಸಿ ಮನೆಯವರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಈ ನಡುವೆ ಮೆಸ್ಕಾಂ ಸಿಬ್ಬಂದಿ ಹೋದ ಬಳಿಕ ಮನೆಯವರು ಗಾಳಿ ಮಳೆಯಿಂದ ಹಾನಿಗೀಡಾದ ಮನೆಯ ಹಂಚನ್ನು ಸರಿಪಡಿಸಲು ಮುಂದಾಗಿದ್ದಾರೆ. ಜನಾರ್ದನ ಆಚಾರ್ಯ ಎಂಬವರು ಏಣಿ ಇಟ್ಟು ಮೇಲೇರುತ್ತಿದ್ದಾಗ ಆಯ ತಪ್ಪಿ ಏಣಿ ವಿದ್ಯುತ್ ತಂತಿಗೆ ತಾಗಿ ಶಾಕ್ ಆಗಿದೆ. ಆದರೆ, ಏಣಿ ತಂತಿಗೆ ಬೀಳುವುದನ್ನು ತಪ್ಪಿಸಲೆಂದು ಮಾಧವ ಆಚಾರ್ಯ ಏಣಿಯನ್ನು ಹಿಡಿದಿದ್ದು ವಿದ್ಯುತ್ ಪ್ರವಹಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿನ್ನಿಗೊಳಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಮರದ ಕೆಲಸ ಮಾಡುತ್ತಿದ್ದು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mulki Electric shock 55-year-old man dies on spot in Mangalore.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm