ಬ್ರೇಕಿಂಗ್ ನ್ಯೂಸ್
17-06-21 01:36 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂ.17: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ವಿರುದ್ಧ ಮೂರು ತಿಂಗಳ ಜೈಲು ಶಿಕ್ಷೆ ಆದೇಶವನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟ ಮೂಲ ದಾವೆ ನಂಬರ್ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಮತ್ತು ಇತರರ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರು ಹಾಗೂ ಸಂಸ್ಥೆಗಳ ಗೌರವಕ್ಕೆ ಹಾನಿಯಾಗುವ ಹೇಳಿಕೆ ಅಥವಾ ಆರೋಪ ಮಾಡದಂತೆ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿತ್ತು. ಈ ಆದೇಶ ಪದೇ ಪದೆ ಉಲ್ಲಂಘನೆಯಾಗುತ್ತಿದ್ದ ಕಾರಣ ಮತ್ತೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್ ಹಿಂದೆ ಎರಡು ಬಾರಿ ಸೋಮನಾಥ ನಾಯಕ್ಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದರ ವಿರುದ್ಧ ಸೋಮನಾಥ ನಾಯಕ್ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಪ್ರಕರಣದ ಹೆಚ್ಚುವರಿ ತನಿಖೆಗೆ ಮೂಲ ಕೋರ್ಟ್ಗೆ ಅರ್ಜಿ ರವಾನಿಸಲ್ಪಟ್ಟಿತ್ತು.

ಈ ಸಂಬಂಧ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಜೂ.8ರಂದು ಅಂತಿಮ ಆದೇಶ ಹೊರಡಿಸಿ, ಹಿಂದಿನ ತೀರ್ಪನ್ನೇ ಪುನರುಚ್ಚರಿಸಿದ್ದಾರೆ. ಮೂರು ತಿಂಗಳ ಜೈಲು ಶಿಕ್ಷೆ ಅಲ್ಲದೆ ಸೋಮನಾಥ ನಾಯಕ್ ಗೆ ಸೇರಿದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿ ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರು. ಪರಿಹಾರ ನೀಡಬೇಕು. ಪ್ರಕರಣದಲ್ಲಿ ಕೋರ್ಟ್ ಅವಧಿ ದುರುಪಯೋಗಪಡಿಸಿ ಮತ್ತೆ ಶ್ರೀ ಕ್ಷೇತ್ರಕ್ಕೆ ಉಪಟಳ ನೀಡಿದ್ದಕ್ಕೆ ಹೆಚ್ಚುವರಿ ಪರಿಹಾರವಾಗಿ 2,000 ರು. ನೀಡುವಂತೆಯೂ ಆದೇಶಿಸಿದೆ ಎಂದು ಎ.ವಿ. ಶೆಟ್ಟಿ ಧರ್ಮಸ್ಥಳದ ಪರವಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Belthanagady Nagarika Trust President Somanath sentenced to months in jail for damaging Dharmasthala Hedges's family name.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm