ಬ್ರೇಕಿಂಗ್ ನ್ಯೂಸ್
17-06-21 11:15 pm Mangaluru Correspondent ಕರಾವಳಿ
ಮಂಗಳೂರು, ಜೂನ್ 17: ಶಾಸಕರು ಶಾಸಕಾಂಗ ಸಭೆ ಕರೆಯಿರಿ ಎಂದರೆ ಕೊರೊನಾ ನಿಯಮ ಎಂದು ನಿರಾಕರಿಸುತ್ತಾರೆ. ಆದರೆ ಈಗ ಅಧಿಕಾರಕ್ಕಾಗಿ ಸಭೆ ಸೇರಿ ಕಚ್ಚಾಟ ನಡೆಸುತ್ತಾರೆ. ಹೀಗೆ ಸಭೆ ಸೇರಿದರೆ ಕೋವಿಡ್ ನಿಯಮ ಅನ್ವಯ ಆಗಲ್ವಾ ಎಂದು ಮಾಜಿ ಸಚಿವ ಯು.ಟಿ. ಖಾದರ್ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯು.ಟಿ. ಖಾದರ್, ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ರಾಜ್ಯದ ಜನರಿಗೆ ದ್ರೋಹವಾಗುತ್ತಿದೆ. ಜನರಿಗೆ ದ್ರೋಹ ಎಸಗುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಜನರು ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆಯಿಲ್ಲ. ಕೋವಿಡ್ ನಿಯಂತ್ರಣಕ್ಕೆ ಸಭೆ ಕರೆದಿಲ್ಲ. ಶಾಸಕರು ಸಭೆ ಕರೆಯಿರಿ ಎಂದು ಹೇಳಿದರೆ ಕೊರೊನಾ ನಿಯಮ ಎಂದು ಹೇಳುತ್ತಾರೆ. ಆದರೆ ಈಗ ಅಧಿಕಾರ ಕಚ್ಚಾಟಕ್ಕೆ ಸಭೆ ಸೇರಿದರೆ ನಿಯಮ ಅನ್ವಯ ಆಗಲ್ವೇ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ನಡವಳಿಕೆಯಿಂದ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದ ಗೌರವ, ಘನತೆಗೆ ಧಕ್ಕೆ ಒದಗಿದೆ. ಸರ್ಕಾರ ರಾಜಕೀಯ ಜಂಜಾಟವನ್ನು ಒಂದು ತಿಂಗಳು ಮುಂದೆ ಹಾಕಲಿ. ಈಗಲಾದರೂ ಜನರ ಕಷ್ಟದ ಬಗ್ಗೆ ಗಮನಹರಿಸಲಿ ಎಂದು ಯು. ಟಿ. ಖಾದರ್ ವಾಗ್ದಾಳಿ ನಡೆಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್, ಡಿಸೇಲ್ನಲ್ಲಿ ಶತಕ ಬಾರಿಸುವ ಮೂಲಕ ಸಾಧನೆಯನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಟೀಕಿಸಿದರು.
ಪೆಟ್ರೋಲ್ ದರ ಏರಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆಯೇರಿಕೆ ಕಾರಣ ಅಂತಾ ಹೇಳುತ್ತಾರೆ. ಆದರೆ ಚುನಾವಣೆ ಬರುವಾಗ ಬೆಲೆ ಕಡಿಮೆಯಾಗುತ್ತದೆ ಎಂದು ಖಾದರ್ ಆರೋಪಿಸಿದರು.
Former MLA U T Khader referring to the rise in prices stated that the petrol stations have become tax-collecting booths for the central government after petrol price touched the Rs 100 mark.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm