ಬ್ರೇಕಿಂಗ್ ನ್ಯೂಸ್
17-06-21 11:15 pm Mangaluru Correspondent ಕರಾವಳಿ
ಮಂಗಳೂರು, ಜೂನ್ 17: ಶಾಸಕರು ಶಾಸಕಾಂಗ ಸಭೆ ಕರೆಯಿರಿ ಎಂದರೆ ಕೊರೊನಾ ನಿಯಮ ಎಂದು ನಿರಾಕರಿಸುತ್ತಾರೆ. ಆದರೆ ಈಗ ಅಧಿಕಾರಕ್ಕಾಗಿ ಸಭೆ ಸೇರಿ ಕಚ್ಚಾಟ ನಡೆಸುತ್ತಾರೆ. ಹೀಗೆ ಸಭೆ ಸೇರಿದರೆ ಕೋವಿಡ್ ನಿಯಮ ಅನ್ವಯ ಆಗಲ್ವಾ ಎಂದು ಮಾಜಿ ಸಚಿವ ಯು.ಟಿ. ಖಾದರ್ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯು.ಟಿ. ಖಾದರ್, ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ರಾಜ್ಯದ ಜನರಿಗೆ ದ್ರೋಹವಾಗುತ್ತಿದೆ. ಜನರಿಗೆ ದ್ರೋಹ ಎಸಗುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಜನರು ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆಯಿಲ್ಲ. ಕೋವಿಡ್ ನಿಯಂತ್ರಣಕ್ಕೆ ಸಭೆ ಕರೆದಿಲ್ಲ. ಶಾಸಕರು ಸಭೆ ಕರೆಯಿರಿ ಎಂದು ಹೇಳಿದರೆ ಕೊರೊನಾ ನಿಯಮ ಎಂದು ಹೇಳುತ್ತಾರೆ. ಆದರೆ ಈಗ ಅಧಿಕಾರ ಕಚ್ಚಾಟಕ್ಕೆ ಸಭೆ ಸೇರಿದರೆ ನಿಯಮ ಅನ್ವಯ ಆಗಲ್ವೇ ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ನಡವಳಿಕೆಯಿಂದ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದ ಗೌರವ, ಘನತೆಗೆ ಧಕ್ಕೆ ಒದಗಿದೆ. ಸರ್ಕಾರ ರಾಜಕೀಯ ಜಂಜಾಟವನ್ನು ಒಂದು ತಿಂಗಳು ಮುಂದೆ ಹಾಕಲಿ. ಈಗಲಾದರೂ ಜನರ ಕಷ್ಟದ ಬಗ್ಗೆ ಗಮನಹರಿಸಲಿ ಎಂದು ಯು. ಟಿ. ಖಾದರ್ ವಾಗ್ದಾಳಿ ನಡೆಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಇತಿಹಾಸದಲ್ಲಿ ನೋಡದ ಸಾಧನೆ ಈ ಮೂಲಕ ಆಗಿದೆ. ಪೆಟ್ರೋಲ್, ಡಿಸೇಲ್ನಲ್ಲಿ ಶತಕ ಬಾರಿಸುವ ಮೂಲಕ ಸಾಧನೆಯನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಟೀಕಿಸಿದರು.
ಪೆಟ್ರೋಲ್ ದರ ಏರಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆಯೇರಿಕೆ ಕಾರಣ ಅಂತಾ ಹೇಳುತ್ತಾರೆ. ಆದರೆ ಚುನಾವಣೆ ಬರುವಾಗ ಬೆಲೆ ಕಡಿಮೆಯಾಗುತ್ತದೆ ಎಂದು ಖಾದರ್ ಆರೋಪಿಸಿದರು.
Former MLA U T Khader referring to the rise in prices stated that the petrol stations have become tax-collecting booths for the central government after petrol price touched the Rs 100 mark.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm