ಬ್ರೇಕಿಂಗ್ ನ್ಯೂಸ್
20-06-21 12:32 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಲಾಕ್ಡೌನ್ ಕಾನೂನು ಉಲ್ಲಂಘಿಸಿ, ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿ ಮದುವೆ ನಡೆದಿದ್ದು, ಸ್ಥಳಕ್ಕೆ ಮಹಾನಗರ ಪಾಲಿಕೆ ಮತ್ತು ಮುಜರಾಯಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯ ಪುತ್ರಿಯ ಮದುವೆ ಸೇರಿದಂತೆ ಐದು ಜೋಡಿಗಳ ಮದುವೆಯನ್ನು ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆಯಲ್ಲಿ ವಾದ್ಯ, ವಾಲಗದಲ್ಲಿ ದಿಬ್ಬಣ ಬಂದಿದ್ದು ಮದುವೆ ಸಮಾರಂಭಕ್ಕೆ ಸಿದ್ಧತೆ ನಡೆದಿತ್ತು. ದೊಡ್ಡ ಪಾರ್ಟಿಯ ಮದುವೆ ಆಗಿದ್ದರಿಂದ ದೇವಸ್ಥಾನದ ಎದುರಲ್ಲಿ 40ಕ್ಕೂ ಹೆಚ್ಚು ಕಾರುಗಳು ನಿಂತಿದ್ದು, ಫುಲ್ ಟ್ರಾಫಿಕ್ ಜಾಮ್ ಕೂಡ ಆಗಿತ್ತು.
ದೇವಸ್ಥಾನದಲ್ಲೇನೊ ಉತ್ಸವ ಇದೆಯೋ ಅನ್ನುವ ರೀತಿ ನೂರಾರು ಜನರು ಸೇರಿದ್ದರು. ಇಷ್ಟಾಗುತ್ತಿದ್ದಂತೆ, ಬೆಳಗ್ಗೆ ಹತ್ತೂವರೆ ಸುಮಾರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಶಿಸ್ತುಕ್ರಮ ಜರುಗಿಸಿದ್ದಾರೆ. ಲಾಕ್ಡೌನ್ ಮಧ್ಯೆ ಮನೆಯಲ್ಲಿ ಮದುವೆ ನಡೆಸುವುದಿದ್ದರೂ, 25 ಜನರಿಗೆ ಮೀರದಂತೆ ಸರಳ ಸಮಾರಂಭ ನಡೆಸಬೇಕು. ಆದರೆ, ಕಾನೂನು ಮಿತಿಯನ್ನು ಮೀರಿ ಅದ್ದೂರಿ ಮದುವೆ ನಡೆದಿದ್ದು, ಸಮಾರಂಭದ ಆಯೋಜಕರ ವಿರುದ್ಧ ಅಧಿಕಾರಿಗಳು ದಬಾಯಿಸಿದ ಪ್ರಸಂಗ ನಡೆಯಿತು.
ಜಿಲ್ಲಾಧಿಕಾರಿಗೆ ಬಂದ ಮಾಹಿತಿ ಮೇರೆಗೆ, ಕಾರ್ಪೊರೇಶನ್ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿತ್ತು. ಸಮಾರಂಭದ ಆಯೋಜಕರು ಮತ್ತು ಮದುವೆಗೆ ಅವಕಾಶ ಕೊಟ್ಟಿದ್ದ ದೇವಸ್ಥಾನದ ಆಡಳಿತ ಕಮಿಟಿ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಮಂಗಳಾದೇವಿ ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಭಕ್ತರಿಗೆ ಪ್ರವೇಶ ಇಲ್ಲದಿರುವಾಗ ಮದುವೆಗೆ ಅವಕಾಶ ಕೊಟ್ಟಿದ್ದು ಹೇಗೆ ಎಂದು ದೇಗುಲದ ಆಡಳಿತಾಧಿಕಾರಿಯ ಬಗ್ಗೆ ಪಾಲಿಕೆ ಅಧಿಕಾರಿಗಳು ಗರಂ ಆಗಿದ್ದಾರೆ. ಮಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಣಗಾಡುತ್ತಿದ್ದು ಇದರ ಮಧ್ಯೆ ಅದ್ದೂರಿ ಮಡುವೆ ನಡೆಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
Temples in Karnataka are not open for devotees due to COVID but in Mangalore a grand wedding has taken place with hundreds of people in Mangaladevi Temple. Concerned officers have raided the place to take action.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm