ಬ್ರೇಕಿಂಗ್ ನ್ಯೂಸ್
20-06-21 12:32 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಲಾಕ್ಡೌನ್ ಕಾನೂನು ಉಲ್ಲಂಘಿಸಿ, ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿ ಮದುವೆ ನಡೆದಿದ್ದು, ಸ್ಥಳಕ್ಕೆ ಮಹಾನಗರ ಪಾಲಿಕೆ ಮತ್ತು ಮುಜರಾಯಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯ ಪುತ್ರಿಯ ಮದುವೆ ಸೇರಿದಂತೆ ಐದು ಜೋಡಿಗಳ ಮದುವೆಯನ್ನು ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆಯಲ್ಲಿ ವಾದ್ಯ, ವಾಲಗದಲ್ಲಿ ದಿಬ್ಬಣ ಬಂದಿದ್ದು ಮದುವೆ ಸಮಾರಂಭಕ್ಕೆ ಸಿದ್ಧತೆ ನಡೆದಿತ್ತು. ದೊಡ್ಡ ಪಾರ್ಟಿಯ ಮದುವೆ ಆಗಿದ್ದರಿಂದ ದೇವಸ್ಥಾನದ ಎದುರಲ್ಲಿ 40ಕ್ಕೂ ಹೆಚ್ಚು ಕಾರುಗಳು ನಿಂತಿದ್ದು, ಫುಲ್ ಟ್ರಾಫಿಕ್ ಜಾಮ್ ಕೂಡ ಆಗಿತ್ತು.


ದೇವಸ್ಥಾನದಲ್ಲೇನೊ ಉತ್ಸವ ಇದೆಯೋ ಅನ್ನುವ ರೀತಿ ನೂರಾರು ಜನರು ಸೇರಿದ್ದರು. ಇಷ್ಟಾಗುತ್ತಿದ್ದಂತೆ, ಬೆಳಗ್ಗೆ ಹತ್ತೂವರೆ ಸುಮಾರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಶಿಸ್ತುಕ್ರಮ ಜರುಗಿಸಿದ್ದಾರೆ. ಲಾಕ್ಡೌನ್ ಮಧ್ಯೆ ಮನೆಯಲ್ಲಿ ಮದುವೆ ನಡೆಸುವುದಿದ್ದರೂ, 25 ಜನರಿಗೆ ಮೀರದಂತೆ ಸರಳ ಸಮಾರಂಭ ನಡೆಸಬೇಕು. ಆದರೆ, ಕಾನೂನು ಮಿತಿಯನ್ನು ಮೀರಿ ಅದ್ದೂರಿ ಮದುವೆ ನಡೆದಿದ್ದು, ಸಮಾರಂಭದ ಆಯೋಜಕರ ವಿರುದ್ಧ ಅಧಿಕಾರಿಗಳು ದಬಾಯಿಸಿದ ಪ್ರಸಂಗ ನಡೆಯಿತು.



ಜಿಲ್ಲಾಧಿಕಾರಿಗೆ ಬಂದ ಮಾಹಿತಿ ಮೇರೆಗೆ, ಕಾರ್ಪೊರೇಶನ್ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿತ್ತು. ಸಮಾರಂಭದ ಆಯೋಜಕರು ಮತ್ತು ಮದುವೆಗೆ ಅವಕಾಶ ಕೊಟ್ಟಿದ್ದ ದೇವಸ್ಥಾನದ ಆಡಳಿತ ಕಮಿಟಿ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಮಂಗಳಾದೇವಿ ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಭಕ್ತರಿಗೆ ಪ್ರವೇಶ ಇಲ್ಲದಿರುವಾಗ ಮದುವೆಗೆ ಅವಕಾಶ ಕೊಟ್ಟಿದ್ದು ಹೇಗೆ ಎಂದು ದೇಗುಲದ ಆಡಳಿತಾಧಿಕಾರಿಯ ಬಗ್ಗೆ ಪಾಲಿಕೆ ಅಧಿಕಾರಿಗಳು ಗರಂ ಆಗಿದ್ದಾರೆ. ಮಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೇರಿ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಣಗಾಡುತ್ತಿದ್ದು ಇದರ ಮಧ್ಯೆ ಅದ್ದೂರಿ ಮಡುವೆ ನಡೆಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
Temples in Karnataka are not open for devotees due to COVID but in Mangalore a grand wedding has taken place with hundreds of people in Mangaladevi Temple. Concerned officers have raided the place to take action.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm