ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.


ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm