ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.
ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm