ಬ್ರೇಕಿಂಗ್ ನ್ಯೂಸ್
21-06-21 05:21 pm Satish, Bengaluru Correspondent ಕರಾವಳಿ
ಉಡುಪಿ, ಜೂ. 21: ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಸೇರಿ ಆರು ಜಿಲ್ಲೆಗಳನ್ನು ಮತ್ತೆ ಅನ್ ಲಾಕ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ ರಾಜ್ಯದ 16 ಜಿಲ್ಲೆಗಳನ್ನು ಪಟ್ಟಿ ಮಾಡಿ ಎರಡನೇ ಹಂತದ ಅನ್ ಲಾಕ್ ಆದೇಶ ಹೊರಡಿಸಿತ್ತು. ಆ ಭಾಗದಲ್ಲಿ ಸಾರಿಗೆ ಸೇರಿದಂತೆ ಬಹುತೇಕ ಚಟುವಟಿಕೆಗಳಿಗೆ ಬೆಳಗ್ಗಿನಿಂದ ಸಂಜೆ 5 ಗಂಟೆ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಈ ಪಟ್ಟಿಯಲ್ಲಿ ಉಡುಪಿ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳು ಇರಲಿಲ್ಲ.
ರಾಜ್ಯ ಸರಕಾರ ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟ ಇರುವ 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆಗೆ ಪರಿಗಣಿಸಿತ್ತು. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ಆ ಪಟ್ಟಿಯಿಂದ ಕೈಬಿಡಲಾಗಿತ್ತು.
ಆದರೆ, ಶೇ.5.02 ಪಾಸಿಟಿವ್ ದರ ಉಡುಪಿ ಜಿಲ್ಲೆಯಲ್ಲಿತ್ತು. ಕೇವಲ ಪಾಯಿಂಟ್ ಅಂತರದ ಕಾರಣಕ್ಕೆ ಜನರನ್ನು ಕಷ್ಟಕ್ಕೆ ದೂಡಬಾರದು ಎಂದು ಶಾಸಕ ರಘುಪತಿ ಭಟ್ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದರು. ಉಡುಪಿಯನ್ನು ಅನ್ ಲಾಕ್ ಮಾಡುವಂತೆ ಒತ್ತಾಯವನ್ನೂ ಮಾಡಿದ್ದರು. ಇದೇ ವೇಳೆ, ಪಾಯಿಂಟ್ ಅಂತರದಲ್ಲಿ ಅನ್ ಲಾಕ್ ಪ್ರಕ್ರಿಯೆಯಿಂದ ಹೊರಗುಳಿದಿದ್ದ ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಿಂದಲೂ ಇದೇ ರೀತಿಯ ಬೇಡಿಕೆ ಬಂದಿತ್ತು.
ಶಾಸಕರು, ಸಂಸದರ ಒತ್ತಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮರು ಆದೇಶ ಮಾಡಿದ್ದು, ಉಡುಪಿ ಸೇರಿ ಆರು ಜಿಲ್ಲೆಗಳನ್ನು ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆಗೆ ಒಳಪಡಿಸಿ ಆದೇಶಿಸಿದ್ದಾರೆ. ಅದರಂತೆ ಬೆಳಗ್ಗೆ ಆರು ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಬಹುತೇಕ ಸರಕಾರಿ ಮತ್ತು ಖಾಸಗಿ ಕಚೇರಿ, ಅಂಗಡಿಗಳನ್ನು ತೆರೆಯಲು ಅನುವು ಮಾಡಲಾಗಿದೆ. ಅಲ್ಲದೆ, ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಓಡಾಟಕ್ಕೂ ಅವಕಾಶ ನೀಡಲಾಗಿದೆ.
ದಕ್ಷಿಣ ಕನ್ನಡ ಪ್ರವೇಶ ಹೊರತುಪಡಿಸಿ ಸಾರಿಗೆ ಬಸ್ ಇನ್ನಿತರ ವಾಹನಗಳು ಉಡುಪಿ, ಶಿವಮೊಗ್ಗ, ಕಾರವಾರ ಭಾಗದಲ್ಲಿ ಓಡಾಡಬಹುದಾಗಿದ್ದು ಎರಡು ತಿಂಗಳ ಲಾಕ್ಡೌನ್ ಬಳಿಕ ಜನರಿಗೆ ಮತ್ತೆ ನಿಟ್ಟುಸಿರು ಬಿಡುವಂತಾಗಿದೆ.
After considering the weekly moving average positivity rate as on June 20, lockdown restrictions have been relaxed in Udupi district from Monday June 21. After the Unlock 2.0 regulations and districts were announced by chief minister (CM) B S Yediyurappa, many had urged for the inclusion of Udupi in the list. Udupi MLA Raghupati Bhat and Udupi-Chikkamagaluru MP Shobha Karandlaje had also urged the CM to relax lockdown restrictions in Udupi earlier.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm