ಬ್ರೇಕಿಂಗ್ ನ್ಯೂಸ್
22-06-21 09:32 pm Richard, Mangaluru ಕರಾವಳಿ
ಮಂಗಳೂರು, ಜೂನ್ 22: ಕಡೆಗೂ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಗಳನ್ನು ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆ ವರೆಗೆ 50 ಶೇ. ಸೀಟ್ ಭರ್ತಿಯೊಂದಿಗೆ ಬಸ್ ಸಂಚಾರ ಮಾಡಲು ಅವಕಾಶ ನೀಡಲಾಗಿದೆ. ಜೂನ್ 23 ರಿಂದಲೇ ಈ ಆದೇಶ ಜಾರಿಗೆ ಬರಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದೆ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರ ವರೆಗೆ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಕೂಡ ಅವಕಾಶ ಮಾಡಲಾಗಿದೆ. ಎರಡು ದಿನಗಳಲ್ಲಿ ಎರಡು ಬಾರಿ ಆದೇಶ, ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯಿಂದ ಜಿಲ್ಲಾಡಳಿತದ ದಿಕ್ಕು ತಪ್ಪಿದ್ಯಾ ಎನ್ನುವ ಅನುಮಾನ ಬಂದಿದೆ.

ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯನ್ನು ನಡೆಸಿದ್ದಾರೆ.
ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಪೂರ್ಣ ಪ್ರಮಾಣದ ವಾರಾಂತ್ಯ ಕರ್ಫ್ಯೂ ಇರಲಿದೆ. ಹಾಲಿನ ಮಾರಾಟ ಕೇಂದ್ರಗಳನ್ನು ತೆರೆಯಲು ಮಾತ್ರ ಈ ಸಮಯದಲ್ಲಿ ಅವಕಾಶ ಕೊಡಲಾಗುವುದು. ಉಳಿದಂತೆ, ಯಾವುದೇ ಚಟುಚಟಿಕೆಗಳಿಗೆ ಅವಕಾಶವಿಲ್ಲ ಎಂದು ಕೋಟ ತಿಳಿಸಿದ್ದಾರೆ.
ಮದುವೆ ಹಾಗೂ ಸಮಾರಂಭಗಳಲ್ಲಿ 25 ಜನರಿಗೆ ಸೀಮಿತಗೊಳಿಸಿ ಮನೆಯಲ್ಲಿಯೇ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಧಾರ್ಮಿಕ ಕೇಂದ್ರ, ಕಲ್ಯಾಣ ಮಂಟಪ ಹಾಗೂ ಇತರೆ ಭವನಗಳಲ್ಲಿ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ದಿನಕ್ಕೆ 9,000 ದಿಂದ 10,000 ದ ವರೆಗೆ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸಿ ಹೆಚ್ಚು ಪರೀಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪ್ರತಾಪ್ಚಂದ್ರ ಶೆಟ್ಟಿ, ಹರೀಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನವಾನೆ, ಡಿ.ಸಿ.ಪಿ ಹರಿರಾಂ ಶಂಕರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹಾಗೂ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.
With lockdown relaxations now in force, the district administration has issued an order in this direction. The below order will be implemented from June 23 to July 5. "Buses will be allowed to operate from Monday to Friday from 7 am to 1 pm with 50% capacity.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm