ಬ್ರೇಕಿಂಗ್ ನ್ಯೂಸ್
23-06-21 06:54 pm Richard, HK Mangaluru ಕರಾವಳಿ
ಉಳ್ಳಾಲ, ಜೂ.23: ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ.
ಅಲೆಗಳ ಜೊತೆ ಸೆಣಸಾಡಿದ ಈಜುರಕ್ಷಕರು !
ಪವನ್ ಹಾರಿದ್ದನ್ನು ನೋಡಿದ ಈಜು ರಕ್ಷಕರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ರುದ್ರಪಾದೆಯ ಕೆಳಭಾಗದಲ್ಲಿ ತೀವ್ರ ಆಳ ಇರುವುದರಿಂದ ಸುಳಿ ಇದ್ದು ಸಕಾಲದಲ್ಲಿ ರಕ್ಷಣೆ ಸಾಧ್ಯವಾಗಲಿಲ್ಲ.
ಬಳಿಕ ಶವ ಅಲೆಗಳಲ್ಲಿ ತೇಲಿ ಬಂದಿದ್ದನ್ನು ಗಮನಿಸಿದ ತಂಡ ಕಡಲಿನ ಅಬ್ಬರ ಜಾಸ್ತಿ ಇದ್ದರೂ ಗೃಹ ರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ, ವೀನುಗಾರರಾದ ಸಾಗರ್, ಕರಾವಳಿ ಕಾವಲು ಪಡೆಯ ಮೋಹನ್, ಸುಜಿತ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ ಸೇರಿ ಅಲೆಗಳೊಂದಿಗೆ ಸೆಣಸಾಡಿ ಮೃತದೇಹವನ್ನ ದಡಕ್ಕೆ ಎಳೆದಿದ್ದಾರೆ.
ಮೃತ ಪವನ್ ಪ್ರತಿಭಾನ್ವಿತರಾಗಿದ್ದು ಖಿನ್ನತೆಯಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಪವನ್ ಸೋಮೇಶ್ವರ ಆನಂದಾಶ್ರಮ ಪ್ರೌಢಶಾಲೆಯ ಹಿಂದಿ ಪಂಡಿತರೆಂದೇ ಖ್ಯಾತರಾದ ನಿವೃತ್ತ ಅಧ್ಯಾಪಕರಾದ ಕೆ.ವಿ. ಕೃಷ್ಣ ಭಟ್ ಅವರ ಮೊಮ್ಮಗನಾಗಿದ್ದು ವಿದ್ಯಾರ್ಥಿ ದಿಸೆಯಲ್ಲೇ ಪ್ರತಿಭಾನ್ವಿತನಾಗಿದ್ದ.
ಮೃತಪಟ್ಟ ಮಗನನ್ನು ಕಡಲ ಕಿನಾರೆಯಲ್ಲೇ ಆಲಂಗಿಸಿ ರೋದಿಸುತ್ತಿದ್ದ ತಾಯಿ ರಾಜೇಶ್ವರಿ ಅವರ ಗೋಳಾಟ ಅಲ್ಲಿ ಸೇರಿದ್ದ ಸಾರ್ವಜನಿಕರು ಮತ್ತು ಪೊಲೀಸರನ್ನು ಮನ ಕಲಕುವಂತೆ ಮಾಡಿತ್ತು.
Mangalore Engineer commits suicide after falling into sea in Someshwara at Ullal . The deceased has been identified as Pawan Bhat (30).
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm