ಬ್ರೇಕಿಂಗ್ ನ್ಯೂಸ್
26-06-21 06:05 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಜೂನ್ 26 ವಿಶ್ವ ಡ್ರಗ್ಸ್ ವಿರೋಧಿ ದಿನ. ಈ ದಿನವಾದ್ರೂ ಡ್ರಗ್ಸ್ ಮುಟ್ಚಬೇಡಿ ಎಂದು ವಿಶ್ವ ಆರೋಗ್ಯ ಸಂಸ್ಥೆ ವಿಶ್ವದ ಜನರಿಗೆ ಎಚ್ಚರಿಸಿದ ದಿನ. ಇದೇ ದಿನವನ್ನು ಜಗತ್ತಿನಾದ್ಯಂತ ವಿಶ್ವ ಡ್ರಗ್ಸ್ ವಿರೋಧಿ ದಿನವನ್ನಾಗಿ ಆಯಾ ಸರಕಾರಗಳು ಆಚರಿಸಿಕೊಂಡು ಬಂದಿವೆ. ಹೀಗಾಗಿ ಕರ್ನಾಟಕದಲ್ಲಿ ಪ್ರತಿ ಬಾರಿ ಇದೇ ದಿನವನ್ನು ಆಯ್ದುಕೊಂಡು ಪೊಲೀಸರು ಬೇರೆ ಬೇರೆ ಪ್ರಕರಣಗಳಲ್ಲಿ ಹಿಡಿದು ಕೂಡಿಟ್ಟ ಗಾಂಜಾ ಸೇರಿ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ಸುಟ್ಟು ಬೂದಿ ಮಾಡುತ್ತಾರೆ.






ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆಯಂತೆ, ಮಂಗಳೂರಿನಲ್ಲಿಯೂ ಡ್ರಗ್ಸ್ ಸುಡುವ ಕಾರ್ಯಕ್ರಮ ನಗರದ ಹೊರವಲಯದ ಮುಲ್ಕಿ ಬಳಿಯ ಬಯೋವೇಸ್ಟ್ ಫ್ಯಾಕ್ಟರಿಯಲ್ಲಿ ನಡೆಯಿತು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 1.38 ಕೋಟಿ ಮೌಲ್ಯದ 130 ಕೇಜಿಗೂ ಹೆಚ್ಚು ಗಾಂಜಾ, 68 ಎಂಡಿಎಂಎ, 41 ಎಲ್ ಎಸ್ ಡಿ ಸ್ಟ್ರಿಪ್ಸ್, ಅಲ್ಪ ಪ್ರಮಾಣದ ಕೊಕೇನ್ ಮತ್ತು ಬ್ರೌನ್ ಶುಗರ್ ಅನ್ನು ಕೂಡ ಸುಟ್ಟು ನಾಶ ಪಡಿಸಲಾಯ್ತು.





ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಠಾಣೆಗಳಲ್ಲಿ ವಶಕ್ಕೆ ಪಡೆದ ಮಾದಕ ದ್ರವ್ಯಗಳನ್ನೂ ಇದೇ ವೇಳೆ ಮುಲ್ಕಿಯ ಬಯೋ ತ್ಯಾಜ್ಯ ಘಟಕದಲ್ಲಿ ನಾಶ ಪಡಿಸಲಾಯಿತು. ಜಿಲ್ಲಾ ವ್ಯಾಪ್ತಿಯಲ್ಲಿ 25 ಲಕ್ಷ ಮೌಲ್ಯದ 221 ಕೇಜಿಯಷ್ಟು ಗಾಂಜಾ ಸಂಗ್ರಹ ಇತ್ತು. ಕಳೆದ ನಾಲ್ಕು ವರ್ಷಗಳಲ್ಲಿ ವಿವಿಧ ಪ್ರಕರಣಗಳಲ್ಲಿ 153 ಮಂದಿಯನ್ನು ಬಂಧಿಸಿ, 383 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ನ್ಯಾಯಾಲಯದ ಆದೇಶದಂತೆ, 221 ಕೇಜಿ ಗಾಂಜಾ ನಾಶ ಪಡಿಸಲಾಗಿದೆ ಎಂದು ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿ, ಡ್ರಗ್ಸ್ ಚಟ ಅಂದರೆ, ಕೆಲವು ಮರಗಳಲ್ಲಿ ಬಂದಣಿಕೆ ಸಸ್ಯ ಅಡರಿಕೊಂಡಂತೆ. ಅದು ದೇಹಕ್ಕೆ ಒಮ್ಮೆ ಅಂಟಿಕೊಂಡರೆ, ಇಡೀ ಶರೀರವನ್ನು ಕೊಲ್ಲುತ್ತಾ ಹೋಗುತ್ತದೆ. ಚಟದಿಂದ ಹೊರ ಬರುವುದಕ್ಕೂ ಕಷ್ಟವಾಗುತ್ತದೆ. ಹೀಗಾಗಿ ಯಾರಾದ್ರೂ ಈ ರೀತಿಯ ಚಟದಲ್ಲಿ ಬಿದ್ದಿದ್ದರೆ, ನಿಮ್ಮ ಸಂಬಂಧಿಕರೇ ಆಗಿದ್ದರೂ ಅವರನ್ನು ಪಾರು ಮಾಡುವುದಕ್ಕಾಗಿ ಪೊಲೀಸರ ಸಹಾಯ ಪಡೆಯಿರಿ. ಕಳೆದ ನಾಲ್ಕು ತಿಂಗಳಲ್ಲಿ ಕಾಸರಗೋಡು ಭಾಗದವರು ಸೇರಿದಂತೆ ಹಲವು ಮಂದಿ ಪೆಡ್ಲರ್ ಗಳನ್ನು ಬಂಧಿಸಿದ್ದೇವೆ. ಡ್ರಗ್ ಮೂಲಕ್ಕೆ ಹೋಗಿ ನೈಜೀರಿಯನ್ ಪ್ರಜೆಯನ್ನೂ ಬಂಧಿಸಿದ್ದೇವೆ. ಆದರೆ, ಡ್ರಗ್ಸ್ ಅಭಿಯಾನದ ಮೂಲಕ ಸಮಾಜಕ್ಕೆ ಅಂಟಿದ ಪಿಡುಗನ್ನು ದೂರ ಮಾಡುವ ಗುರಿ ಇಟ್ಟುಕೊಂಡಿದ್ದೇವೆ. ಜನರು ಸಹಕಾರ ಕೊಡಬೇಕು ಎಂದು ಹೇಳಿದರು.
ಉಡುಪಿ ಜಿಲ್ಲೆಯಲ್ಲಿ 1.28 ಕೋಟಿ ಮೌಲ್ಯದ ಡ್ರಗ್ ನಾಶ
ಉಡುಪಿ ಜಿಲ್ಲೆಯ ನಂದಿಕೂರಿನ ಆಯುಷ್ ಬಯೋ ಮೆಟ್ರಿಕ್ ವೇಸ್ಟ್ ನಿರ್ವಹಣಾ ಘಟಕದಲ್ಲಿ 50 ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ 1.28 ಕೋಟಿ ರೂ. ಮೌಲ್ಯದ ಗಾಂಜಾ ಸೇರಿ ವಿವಿಧ ರೀತಿಯ ಡ್ರಗ್ಸ್ ಅನ್ನು ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತಾಡಿದ ಉಡುಪಿ ಎಸ್ ಪಿ ವಿಷ್ಣುವರ್ಧನ್, 2008ರಿಂದ 2021ರ ಇದುವರೆಗಿನ ಎಲ್ಲಾ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. ಇನ್ನು ಪ್ರತೀ ವರ್ಷವೂ ಇದನ್ನು ಮಾದಕ ದ್ರವ್ಯ ವಿರೋಧಿ ದಿನವಾದ ಜೂ. 26ರಂದು ಮುಂದುವರಿಸಲಾಗುವುದು. ಉಡುಪಿ ಜಿಲ್ಲೆಯ ಎಲ್ಲಾ ಮಾದಕ ದ್ರವ್ಯ ವ್ಯಸನಿಗಳು ಮತ್ತು ಕಳ್ಳಸಾಗಣೆದಾರರ ಮೇಲೆ ಇಲಾಖೆ ನಿಗಾ ಇಡಲಾಗಿದೆ. ಮಾದಕ ದ್ರವ್ಯ ವ್ಯಸನದ ವಿರುದ್ಧ ಇಲಾಖಾ ಸಮರವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.
Video:
On International Day against Drug Abuse, seized drugs worth Rs 1.38 crore were destroyed by Mangaluru and Udupi police on Saturday, June 26. Drugs worth approximately Rs 10 lac were destroyed in Mangaluru while the same worth Rs Rs 1,00,28,600 was disposed of in Udupi.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm