ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm