ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm