ಬ್ರೇಕಿಂಗ್ ನ್ಯೂಸ್
28-06-21 12:55 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಾಷ್ಟ್ರೀಯ ಹೆದ್ದಾರಿ ಕೋಟೆಕಾರು ಬೀರಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ಫಾಸ್ಟ್ ಫುಡ್ ಸೆಂಟರಿಗೆ ಮಾತ್ರ ಇಂದು ವೀಕೆಂಡ್ ಲಾಕ್ಡೌನ್ ಇರಲಿಲ್ಲ. ಲಾಕ್ಡೌನಲ್ಲಿ ಹೊಟೇಲ್ ಒಳಗೆ ಕುಳಿತು ತಿನ್ನಲು ಅವಕಾಶ ಇರದಿದ್ದರೂ, ಭಾನುವಾರ ಸಂಜೆಯಿಂದಲೇ ಟಿಕ್ಕಾ ಪಾಯಿಂಟ್ ನಲ್ಲಿ ಭರ್ಜರಿ ವ್ಯಾಪಾರ ನಡೆದಿದೆ.
ಹೆದ್ದಾರಿಯ ಅಂಚಿನಲ್ಲಿರುವ ಟಿಕ್ಕಾ ಪಾಯಿಂಟ್ ಫಾಸ್ಟ್ ಫುಡ್ ಸೆಂಟರ್ ವೀಕೆಂಡಲ್ಲಿ ಯಾವತ್ತೂ ಭರ್ಜರಿ ವ್ಯಾಪಾರಕ್ಕೆ ಪ್ರಸಿದ್ಧಿ. ಈ ಬಾರಿ ಲಾಕ್ಡೌನ್ ಇದ್ದರೂ ಅದನ್ನು ಲೆಕ್ಕಿಸದೆ ವ್ಯಾಪಾರ ನಡೆಸಲಾಗಿದೆ. ಕಳೆದ ಎರಡು ತಿಂಗಳ ಲಾಕ್ಡೌನಲ್ಲಿಯೂ ಪಾರ್ಸೆಲ್ ನೆಪದಲ್ಲಿ ಈ ಫಾಸ್ಟ್ ಫುಡ್ ಮಳಿಗೆ ಇದೇ ರೀತಿ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಸಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಈ ವಾರದ ವೀಕೆಂಡ್ ಲಾಕ್ಡೌನಲ್ಲಿ ಪೊಲೀಸರು ಕೆಲಸಕ್ಕೆ ತೆರಳುವ ಬಡಪಾಯಿ ದ್ವಿಚಕ್ರ ವಾಹನ ಸವಾರರ ವಾಹನಗಳನ್ನ ಜಪ್ತಿಗೊಳಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳನ್ನೂ ಬಂದ್ ಮಾಡಿಸಿ ವೀಕೆಂಡ್ ಲಾಕ್ಡೌನನ್ನ ಕಟ್ಟುನಿಟ್ಟಾಗಿ ನಿಭಾಯಿಸಿದ್ದಾರೆ. ಆದರೆ ಉಳ್ಳಾಲ ಪೊಲೀಸರು ಮಾತ್ರ ಹೆದ್ದಾರಿ ಬದಿಯಲ್ಲೇ ಇರುವ ಲಾಕ್ಡೌನ್ ನಿಯಮವನ್ನ ಲೆಕ್ಕಿಸದೆ ಕಾರ್ಯಾಚರಿಸುತ್ತಿರುವ ಟಿಕ್ಕಾ ಪಾಯಿಂಟನ್ನು ಮಾತ್ರ ಬಂದ್ ಮಾಡಿಸಿಲ್ಲ.


ಟಿಕ್ಕದಲ್ಲಿ ಪಾಲು ಪಡೆದರೇ ಅಧಿಕಾರಿಗಳು ?
ಟಿಕ್ಕಾ ಪಾಯಿಂಟ್ ಲಾಕ್ಡೌನ್ ಸಮಯದಲ್ಲಿ ನಿಯಮ ಮೀರಿ ನಡು ರಾತ್ರಿಯವರೆಗೂ ವಹಿವಾಟು ನಡೆಸಿದೆ. ಪಾರ್ಸೆಲ್ ಮಾತ್ರ ಎಂಬ ಅವಕಾಶವನ್ನು ಬಳಸ್ಕೊಂಡು ವೀಕೆಂಡ್ ಲಾಕ್ಡೌನಲ್ಲೂ ಹೊಟೇಲ್ ತೆರೆದಿಟ್ಟು ಮೇಲಿನ ಅಂತಸ್ತಿನಲ್ಲಿ ಗ್ರಾಹಕರಿಗೆ ಟೇಬಲ್ ಹಾಸಿ ಆಹಾರ ಸಪ್ಲೈ ಮಾಡುತ್ತಿದೆ. ಸ್ಥಳೀಯ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರಿಗಳು ಮತ್ತು ಉಳ್ಳಾಲದ ಪೊಲೀಸರು ಈ ಬಗ್ಗೆ ತಿಳಿದಿದ್ದರೂ ಮೌನವಾಗಿ ಸಮ್ಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಒಳಭಾಗದಲ್ಲಿಯೂ ಯಾವುದೇ ಮಾಸ್ಕ್ ಆಗಲೀ, ಅಂತರವನ್ನಾಗಲೀ ಇಟ್ಟುಕೊಳ್ಳದೆ ವ್ಯಾಪಾರ ನಡೆಸಲಾಗುತ್ತಿದೆ.


ಕ್ರಮ ಕೈಗೊಳ್ಳುತ್ತೇನೆಂದ ನಗರ ಡಿಸಿಪಿ
ವೀಕೆಂಡ್ ಲಾಕ್ಡೌನಲ್ಲೂ ನಿಯಮ ಮೀರಿ ವ್ಯಾಪಾರ ನಡೆಸುತ್ತಿರುವ ಟಿಕ್ಕ ಪಾಯಿಂಟ್ ಬಗ್ಗೆ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ಅವರಿಗೆ ಮಾಹಿತಿ ನೀಡಿದ್ದು ಅಕ್ರಮವಾಗಿ ನಡೆಸಲಾಗುತ್ತಿದ್ದರೆ ಕೇಸು ದಾಖಲಿಸುವುದಾಗಿ ಹೇಳಿದ್ದಾರೆ.
Ullal Kotekar Tikka Point Restaurant violates covid guidelines hotel open for dinner. The covid guidelines state that hotels are only opened for delivery.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm