ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm