ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm