ಬ್ರೇಕಿಂಗ್ ನ್ಯೂಸ್
01-08-20 07:51 am Headline Karnataka News Network ಕರಾವಳಿ
ಮಂಗಳೂರು : ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಐಸಿಸ್ ಉಗ್ರರು ನೆಲೆಯೂರಿದ್ದಾರೆಂದು ವಿಶ್ವಸಂಸ್ಥೆ ನೀಡಿರುವ ವರದಿ ಕರಾವಳಿಯಲ್ಲಿ ಸಂಚಲನ ಮೂಡಿಸಿದೆ. ಕಳೆದ ಎರಡು ತಿಂಗಳಿಂದ ಕರಾವಳಿ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳು ಏಕ್ಟಿವ್ ಆಗಿರುವುದು ಈಗಾಗ್ಲೇ ಗುಪ್ತಚರ ಅಧಿಕಾರಿಗಳಿಗೆ ತಲೆನೋವು ತಂದಿದ್ದರೆ, ಇದೀಗ ಐಸಿಸ್ ಉಗ್ರರು ದಾಳಿಗೆ ಸಂಚು ನಡೆಸಿದ್ದಾರೆ ಎನ್ನುವ ವರದಿ ಆಘಾತ ಮೂಡಿಸಿದೆ.
ಪಾಕ್, ಬಾಂಗ್ಲಾ ಮೂಲದ 150ರಿಂದ 200 ರಷ್ಟು ಉಗ್ರರು ತಮ್ಮ ಮುಖಂಡನ ದಾಳಿಗೆ ಪ್ರತೀಕಾರ ತೀರಿಸಲು ಪ್ರಬಲ ಸಂಚು ರೂಪಿಸಿದ್ದಾರೆಂದು ವಿಶ್ವಸಂಸ್ಥೆ ವರದಿ ಹೇಳಿದೆ. ಇದೇ ಸಂದರ್ಭದಲ್ಲಿ ಸ್ಯಾಟಲೈಟ್ ಫೋನ್ ಗಳು ಕರಾವಳಿಯಲ್ಲಿ ಸದ್ದು ಮಾಡುತ್ತಿದ್ದು ನಿಷೇಧಿತ ತುರಾಯಾ ಫೋನ್ ಗಳು ಅರಣ್ಯ ಪ್ರದೇಶದಲ್ಲಿ ಸಕ್ರಿಯವಾಗಿರುವುದನ್ನು ಗುಪ್ತಚರ ಅಧಿಕಾರಿಗಳು ದೃಢಪಡಿಸಿದ್ದಾರೆ.
ಆದರೆ, ಫೋನ್ ಜಾಡು ಹಿಡಿದು ಹೋದ ಗುಪ್ತಚರ ಹಾಗು ಆಂತರಿಕ ಭದ್ರತೆ ಇಲಾಖೆಯ ಅಧಿಕಾರಿಗಳಿಗೆ ಅದನ್ನು ಟ್ರೇಸ್ ಮಾಡಲು ಸಾಧ್ಯವಾಗಿಲ್ಲ. ಇತ್ತೀಚೆಗೆ ಧರ್ಮಸ್ಥಳ ಬಳಿಯ ಬೆಳಾಲು, ಉಡುಪಿ ಜಿಲ್ಲೆಯ ಕಾರ್ಕಳ ಬಳಿಯ ಬಜಗೋಳಿ, ಉತ್ತರ ಕನ್ನಡ ಜಿಲ್ಕೆಯ ಕೆಲಭಾಗ ದಲ್ಲಿ ಹೀಗೆ ಎಲ್ಲೆಲ್ಲಿಂದಲೋ ಫೋನ್ ಸಂಪರ್ಕ ಆಗಿರುವ ಲೊಕೇಷನ್ ಮಾತ್ರ ಟ್ರೇಸ್ ಮಾಡಲಾಗಿದೆ.
ಈಗ ವಿಶ್ವಸಂಸ್ಥೆಯೂ ಕರ್ನಾಟಕ, ಕೇರಳದಲ್ಲಿ ಉಗ್ರರು ನೆಲೆಯೂರಿದ್ದನ್ನು ಹೇಳಿರುವುದು ಸ್ಯಾಟಲೈಟ್ ಫೋನ್ ಏಕ್ಟಿವ್ ಆಗಿದ್ದರ ಹಿಂದೆ ಟೆರರ್ ಲಿಂಕ್ ಇರಬಹುದೇ ಎನ್ನುವ ಶಂಕೆಗೆ ಮೂಡಲಾರಂಭಿದಿದೆ . ಟೆರರ್ ಲಿಂಕ್ ಬಗ್ಗೆ ಅನುಮಾನ ಕೇಳಿಬಂದಿದ್ದರೂ, ಅದಕ್ಕೆ ಯಾವುದೇ ಆಧಾರ ಇರಲಿಲ್ಲ. ಈಗ ಫೋನ್ ಸ್ಯಾಟಲೈಟ್ ಆ್ಯಕ್ಟಿವ್ ಆಗಿರುವುದಕ್ಕೂ ಟೆರರಿಸ್ಟ್ ಗಳು ಆಗಿರುವುದಕ್ಕೂ ಡೈರೆಕ್ಟ್ ಲಿಂಕ್ ಇರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸೈಲಂಟ್ ಆಗಿರುವಾಗಲೇ ಉಗ್ರರು ಸೇಡು ತೀರಿಸಲು ಸಂಚು ನಡೆಸಿದ್ದಾರೆಯೇ ಅನ್ನೋ ಶಂಕೆ ಬಲಗೊಳ್ಳುತ್ತಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm