ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.


ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
28-08-26 12:13 pm
HK News Staffer
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am